Monday, December 10, 2012

ಸುಭದ್ರ ಸರ್ಕಾರ ಎಂಬ ಮಾಯಾಮೃಗದ ಬೆನ್ನಟ್ಟಿ... Dec 10 2012


`ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಬಹುದೆಂಬ ನಿರೀಕ್ಷೆಯನ್ನು ಇಟ್ಟುಕೊಂಡ ಏಕೈಕ ಪಕ್ಷ ಕಾಂಗ್ರೆಸ್. ಬಹಿರಂಗ ಘೋಷಣೆಗಳೇನೇ ಇರಲಿ, ಬೇರೆ ಯಾವ ಪಕ್ಷವೂ ಬಹುಮತ ಗಳಿಸಬಹುದೆಂಬ ನಿರೀಕ್ಷೆಯನ್ನು ಅಂತರಂಗದಲ್ಲಿ ಇಟ್ಟುಕೊಂಡ ಹಾಗೆ ಕಾಣುವುದಿಲ್ಲ.
ಹಿಂದಿನ ಯಾವ ಚುನಾವಣೆಯಲ್ಲಿಯೂ ಈ ಪರಿಸ್ಥಿತಿಯನ್ನು ನಾನು ಕಂಡಿರಲಿಲ್ಲ, ಕನಿಷ್ಠ ಎರಡು ಪಕ್ಷಗಳ ನಡುವೆ ಬಹುಮತಕ್ಕಾಗಿ ಒಂದಷ್ಟು ಪೈಪೋಟಿ ಇರುತ್ತಿತ್ತು, ಫಲಿತಾಂಶವನ್ನು ಊಹಿಸುವುದು ಕಷ್ಟವಾಗುತ್ತಿತ್ತು..' ಎಂದು ಹೇಳಿದವರು ಲಂಡನ್‌ನ ಕಾಮನ್‌ವೆಲ್ತ್ ಅಧ್ಯಯನ ಸಂಸ್ಥೆಯ ಪ್ರೊ.ಜೇಮ್ಸ ಮೇನರ್.
ಇತ್ತೀಚೆಗೆ `ಪ್ರಜಾವಾಣಿ' ಕಚೇರಿಗೆ ಬಂದು ನಮ್ಮನ್ನುದ್ದೇಶಿಸಿ ಮಾತನಾಡಿದ ಜೇಮ್ಸ ತನ್ನ ಇತ್ತೀಚಿನ ಸುತ್ತಾಟದಲ್ಲಿ ಕಂಡುಕೊಂಡ ಈ ರಾಜಕೀಯ ಒಳನೋಟವನ್ನು ನೀಡಿದರು. 1972ರಿಂದ ರಾಜ್ಯದಲ್ಲಿ ನಡೆದ ಎಲ್ಲ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಸಮೀಪದಿಂದ ಕಂಡಿರುವ, ಅದರ ವಿಶ್ಲೇಷಣೆಗಳನ್ನು ನಿಖರವಾಗಿ ಮಾಡಿರುವ ಮತ್ತು ಕರ್ನಾಟಕದ ಮೂಲೆಮೂಲೆಗಳನ್ನು ಸುತ್ತಿ ಹೆಚ್ಚು ಕಡಿಮೆ ಕನ್ನಡಿಗರೇ ಆಗಿರುವ ಜೇಮ್ಸ, ಕರ್ನಾಟಕದ ರಾಜಕೀಯದ ಬಗ್ಗೆ ಅಧಿಕಾರಯುತವಾಗಿ ಮಾತನಾಡಬಲ್ಲ ರಾಜಕೀಯ ಪಂಡಿತ. ಅವರು ಹೇಳಿದ್ದನ್ನು ನಂಬಲೇ ಬೇಕು ಆದರೆ..?
ಹಿಂದಿನ ಚುನಾವಣೆಗಳ ಫಲಿತಾಂಶ ಮತ್ತು ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಮುಂದಿಟ್ಟುಕೊಂಡು ನೋಡಿದರೆ ಅಧಿಕಾರದ ಕಡೆಗೆ ಕಾಂಗ್ರೆಸ್ ಹಾದಿ ಸುಲಭದ್ದೆಂದು  ಅನಿಸಿಬಿಡುವುದು ಸಹಜ. ಎಚ್.ಡಿ.ಕುಮಾರಸ್ವಾಮಿಯವರ ವಚನಭಂಗದಿಂದಾಗಿ ಯಡಿಯೂರಪ್ಪನವರ ಪರ ಎದ್ದಿದ್ದ ಅನುಕುಂಪದ ಅಲೆ, ಬಳ್ಳಾರಿಯ ರೆಡ್ಡಿ ಸೋದರರ ದುಡ್ಡಿನ ಬಲ, ತಳಮಟ್ಟದಲ್ಲಿನ ಸಂಘ ಪರಿವಾರದ ಬದ್ದ ಕಾರ್ಯಕರ್ತರ ಜಾಲ ಹಾಗೂ ಪರಿಶಿಷ್ಟ ಜಾತಿಯ ಗುಂಪನ್ನು ಒಡೆದು ಮಾದಿಗರು, ಲಂಬಾಣಿ ಮತ್ತು ಬೋವಿ ಸಮುದಾಯಗಳನ್ನು ಸೆಳೆದುಕೊಂಡ `ಸೋಷಿಯಲ್ ಎಂಜಿನಿಯರಿಂಗ್'- 2008ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣಗಳು. ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಈಗ ಬಿಜೆಪಿ ನಾಯಕರು ಚೀರಿಚೀರಿ ಹೇಳಿದರೂ ಅಂದಿನ ಪರಿಸ್ಥಿತಿ ಈಗ ಇಲ್ಲವೆನ್ನುವುದು ಅವರ ಅಂತರಂಗಕ್ಕೂ ಗೊತ್ತು.
ಯಡಿಯೂರಪ್ಪನವರ ನಿರ್ಗಮನ ಮತ್ತು ರೆಡ್ಡಿ ಸೋದರರ ಜೈಲು ವಾಸದಿಂದಾಗಿ ಈ ಎರಡು ಮೂಲಗಳ ಬಲವನ್ನು ಬಿಜೆಪಿ ಕಳೆದುಕೊಂಡಿದೆ. ಬಿಜೆಪಿಯ ಸೋಲು ನಿಶ್ಚಿತ ಎಂಬುದಕ್ಕೆ ಬೇರೆ ಕಾರಣಗಳು ಬೇಕಿಲ್ಲ. ಆದರೆ ಇದರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬರಬಹುದೇ?
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಶೇಕಡಾ 1.2ರಷ್ಟು ಹೆಚ್ಚು ಮತಗಳನ್ನು ಗಳಿಸಿದ್ದರೂ ಸ್ಥಾನಗಳ ಲೆಕ್ಕದಲ್ಲಿ ಬಿಜೆಪಿಗಿಂತ 30 ಸ್ಥಾನಗಳನ್ನು ಕಡಿಮೆ ಪಡೆದಿತ್ತು.
ಚುನಾವಣಾ ಫಲಿತಾಂಶದ ಈ ಗಣಿತ ಸುಲಭದಲ್ಲಿ ಅರ್ಥವಾಗುವಂತಹದ್ದಲ್ಲ. ಮತಪ್ರಮಾಣಕ್ಕೆ ಅನುಗುಣವಾಗಿ ಸ್ಥಾನಗಳ ಲೆಕ್ಕ ಹಾಕಲಾಗುವುದಿಲ್ಲ. ಸ್ಥಾನಗಳ ಸಂಖ್ಯೆಯನ್ನು ನಿರ್ಧರಿಸುವುದು ಕೇವಲ ಮತಗಳಲ್ಲ, ಅದು ಮತಸಾಂದ್ರತೆ. ಈ ಕಾರಣದಿಂದಾಗಿಯೇ ಹಳೆಮೈಸೂರು ಭಾಗದಲ್ಲಿ ಹೆಚ್ಚು ಜನಪ್ರಿಯವಾಗಿರುವ ಜೆಡಿ(ಎಸ್) ಶೇಕಡಾ 19.44ರಷ್ಟು ಮತಗಳಿಸಿದರೂ 28  ಸ್ಥಾನಗಳನ್ನು ಮತ್ತು ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್ಚು ಜನಪ್ರಿಯವಾಗಿರುವ ಬಿಜೆಪಿ 33.93ರಷ್ಟು ಮತಗಳ ಆಧಾರದಲ್ಲಿ  110 ಸ್ಥಾನಗಳನ್ನು ಗಳಿಸಲು ಸಾಧ್ಯವಾಗಿರುವುದು.
ಕಾಂಗ್ರೆಸ್ ಪಕ್ಷ ಶೇಕಡಾ 35.13ರಷ್ಟು ಮತಗಳನ್ನು ಪಡೆದರೂ 80ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯಲಾಗದಿರುವುದಕ್ಕೂ ಇದೇ ಕಾರಣ. ಕಾಂಗ್ರೆಸ್ ರಾಜ್ಯದ ಎಲ್ಲ ಭಾಗಗಳಲ್ಲಿ ಸಾಮಾನ್ಯವಾದ ಜನ ಬೆಂಬಲ ಹೊಂದಿದ್ದರೆ, ಬಿಜೆಪಿ ಮತ್ತು ಜೆಡಿ (ಎಸ್) ನಿರ್ದಿಷ್ಟ ಪ್ರದೇಶಗಳಲ್ಲಿ ಕಾಂಗ್ರೆಸ್‌ಪಕ್ಷದ ಸರಾಸರಿ ಜನಬೆಂಬಲಕ್ಕಿಂತಲೂ ಹೆಚ್ಚಿನ ಪ್ರಮಾಣದ ಬೆಂಬಲ ಹೊಂದಿವೆ.
ಯಡಿಯೂರಪ್ಪನವರ ನಿರ್ಗಮನದಿಂದ ಬಿಜೆಪಿ ಶಕ್ತಿ ಕುಂದಲಿರುವುದು ಖಾತರಿ. ಆದರೆ ಬಿಜೆಪಿ ಬುಟ್ಟಿಯಿಂದ ಜಿಗಿದ ಮತಗಳು ನೇರವಾಗಿ ಕಾಂಗ್ರೆಸ್ ಮಡಿಲಿಗೆ ಬೀಳುವುದೇ ಇಲ್ಲವೆ ಅದು ಯಡಿಯೂರಪ್ಪನವರ ಕಡೆಗೆ ಹೋಗಲಿದೆಯೇ ಎನ್ನುವುದು ಪ್ರಶ್ನೆ. ಬಹುಶಃ ಈ ಪ್ರಶ್ನೆಯೇ ಮುಂದಿನ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸಲಿದೆ.
ಬಿಜೆಪಿಯಿಂದ ಸಿಡಿದುಹೋಗಲಿರುವುದು ಬಹುತೇಕ ಲಿಂಗಾಯತ ಮತಗಳು. ಅವುಗಳು ಯಡಿಯೂರಪ್ಪನವರ ಕಡೆಗೆ ಹೋಗುವ ಸಾಧ್ಯತೆಯೇ ಹೆಚ್ಚು. ಈ `ಮತಾಂತರ'ದಿಂದ ಯಾರಿಗೆ ಎಷ್ಟು ಲಾಭ? ಕಾಂಗ್ರೆಸ್ ಹೆಚ್ಚುವರಿ ಸ್ಥಾನಗಳನ್ನು ಗಳಿಸಲು ಸಾಧ್ಯವಾಗಬಹುದೇ? ಯಡಿಯೂರಪ್ಪನವರ ಪಕ್ಷವನ್ನು ನಿರ್ಣಾಯಕ ಸ್ಥಾನದಲ್ಲಿ ಕೊಂಡೊಯ್ದು ನಿಲ್ಲಿಸಬಹುದೇ?
ಯಡಿಯೂರಪ್ಪನವರೇ ಬಿಜೆಪಿಯಿಂದ ಒಂದಷ್ಟು ಮತಗಳನ್ನು ಕಿತ್ತುಕೊಂಡರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭವಾಗಲಾರದು. ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಜೆಪಿಯಿಂದ ಹೊರಹೋಗುವ ಮತಗಳು ತಮ್ಮ ಬುಟ್ಟಿಗೆ ಬಂದು ಬೀಳುವಂತೆ ಕಾಂಗ್ರೆಸ್ ಪಕ್ಷ ಮಾಡಬೇಕಾಗುತ್ತದೆ. ಅದೇ ರೀತಿ ಬಿಜೆಪಿಯಿಂದ ಕಿತ್ತುಕೊಂಡ ಮತಗಳಿಂದಲೇ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಲು ಯಡಿಯೂರಪ್ಪನವರಿಗೂ ಸಾಧ್ಯವಾಗಲಾರದು.
ಲಿಂಗಾಯತರೆಲ್ಲರೂ ಮತಹಾಕಿದರೂ ಅದು ಶೇಕಡಾ ಹದಿನೈದರ ಪ್ರಮಾಣವನ್ನು ದಾಟುವುದಿಲ್ಲ, ಉತ್ತರ ಕರ್ನಾಟಕದ ಕೆಲವು ನಿರ್ದಿಷ್ಟ ಕ್ಷೇತ್ರಗಳಲ್ಲಿ ಲಿಂಗಾಯತರ ಜನಸಂಖ್ಯೆ ಶೇಕಡಾ 20-25ರಷ್ಟಿದೆ ಎಂದಿಟ್ಟುಕೊಂಡರೂ ಅವರೆಲ್ಲರೂ ಕಣ್ಣುಮುಚ್ಚಿ ಯಡಿಯೂರಪ್ಪನವರ ಪಕ್ಷಕ್ಕೆ ಮತಹಾಕಲಿದ್ದಾರೆ ಎಂಬ ಖಾತರಿ ಇಲ್ಲ. ಕನಿಷ್ಠ ಶೇಕಡಾ 25ರಿಂದ 30ರಷ್ಟು ಮತಗಳನ್ನು ಪಡೆಯದೆ ಸ್ಥಾನಗಳನ್ನು ಗೆಲ್ಲುವುದು ಕಷ್ಟ. ಇದಕ್ಕಾಗಿ ಎಲ್ಲ ಜಾತಿ-ಧರ್ಮಗಳ ಮತದಾರರ ಬೆಂಬಲ ಅಗತ್ಯ.
ಯಡಿಯೂರಪ್ಪನವರು ಅದೇ ಪ್ರಯತ್ನದಲ್ಲಿದ್ದಾರೆ.  ಯಡಿಯೂರಪ್ಪನವರ ಬಂಡಾಯ ಬಿಜೆಪಿ ಸೋಲಿನಲ್ಲಿ ಕೊನೆಗೊಳ್ಳಬಹುದು, ಆದರೆ ಕೆಜೆಪಿ ಇಲ್ಲವೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಾಗಬಹುದು ಎಂದು ಹೇಳಲು ಸಾಧ್ಯ ಇಲ್ಲ.ಹೀಗಾದರೆ ಸುಭದ್ರ ಸರ್ಕಾರ ಸಾಧ್ಯವೇ? ಯಾವುದಾದರೂ ಒಂದು ಪಕ್ಷ 113 ಸ್ಥಾನಗಳನ್ನು ಗಳಿಸಿದರೆ ಇದು ಸಾಧ್ಯವಾಗಬಹುದು.
ಜೇಮ್ಸ ಮೇನರ್ ಪ್ರಕಾರ  ಸದ್ಯಕ್ಕೆ ಅಂತಹ ಅವಕಾಶ ಇರುವುದು ಕಾಂಗ್ರೆಸ್ ಪಕ್ಷಕ್ಕೆ. ಆದರೆ ಕಾಂಗ್ರೆಸ್ ಪಕ್ಷವೂ ಸೇರಿದಂತೆ ಯಾವ ಪಕ್ಷವೂ ನೂರರ ಗಡಿಯನ್ನು ದಾಟದೆ ಹೋದರೆ? ಉದಾಹರಣೆಗೆ ಕಾಂಗ್ರೆಸ್ ಪಕ್ಷ 90-95, ಬಿಜೆಪಿ 60-65, ಬಿ.ಎಸ್.ಯಡಿಯೂರಪ್ಪ 30-35, ಜೆಡಿ (ಎಸ್) 30-35 ಮತ್ತು ಬಿಎಸ್‌ಆರ್ ಪಕ್ಷ ಹಾಗೂ ಪಕ್ಷೇತರರು 10-15 ಸ್ಥಾನಗಳನ್ನು ಗಳಿಸಿದರೆ ಸುಲಭದಲ್ಲಿ ಸರ್ಕಾರ ರಚಿಸುವುದು ಸಾಧ್ಯವಾದೀತೇ? ಅತ್ಯಧಿಕ ಸ್ಥಾನಗಳನ್ನು ಹೊಂದಿರುವ ಪಕ್ಷಕ್ಕೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡುವುದು ರೂಢಿಯಾಗಿರುವ ಕಾರಣ ಮತ್ತು ರಾಜಭವನದಲ್ಲಿ ಅನುಕೂಲಕರ ರಾಜ್ಯಪಾಲರೇ ಕೂತಿರುವುದರಿಂದ  ಸರ್ಕಾರ ರಚನೆಗೆ ಆಹ್ವಾನ ಪಡೆಯುವುದು ಆಗಲೂ ಕಾಂಗ್ರೆಸ್ ಪಕ್ಷಕ್ಕೆ ಕಷ್ಟ ಅಲ್ಲ.
ಯಾರಿಗೂ ಸ್ಪಷ್ಟ ಬಹುಮತ ಇಲ್ಲದೆ ಇರುವ ಇಂತಹ ಸಂದರ್ಭದಲ್ಲಿ ಬಗೆಬಗೆಯ ಆಪರೇಷನ್‌ಗಳು ನಡೆಯಲಿರುವುದು ಖಂಡಿತ. ಹೆಚ್ಚು ಸ್ಥಾನಗಳನ್ನು ಹೊಂದಿರುವ ಮತ್ತು ಕೇಂದ್ರದಲ್ಲಿಯೂ ಅಧಿಕಾರದಲ್ಲಿರುವ ಕಾರಣಗಳಿಂದಾಗಿ ಕಾಂಗ್ರೆಸ್ ನಡೆಸುವ `ಆಪರೇಷನ್'ಗಳಿಗೆ ಯಶಸ್ಸು ಸಿಗುವ ಸಾಧ್ಯತೆ ಹೆಚ್ಚಿದ್ದರೂ ಉಳಿದ ಪಕ್ಷಗಳೂ ಕೈಕಟ್ಟಿ ಕೂರಲಾರವು.
ಯಡಿಯೂರಪ್ಪನವರು ಬಿಜೆಪಿಯನ್ನು ತೊರೆದು ಬಂದಿರಬಹುದು, ಬಿಜೆಪಿ ನಾಯಕರನ್ನು ಮನಸಾರೆ ನಿಂದಿಸಿರಬಹುದು, ಅಷ್ಟೇ ಕೆಟ್ಟದಾಗಿ ಯಡಿಯೂರಪ್ಪ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಮಾತನಾಡಿರಬಹುದು. ಆದರೆ ಮುಂದಿನ ಚುನಾವಣೆಯ ಫಲಿತಾಂಶದ ನಂತರ ಪರಸ್ಪರ ಒಟ್ಟಾಗುವುದರಿಂದ ಅಧಿಕಾರ ಹಿಡಿಯುವುದು ಸಾಧ್ಯ ಎಂದು ಗೊತ್ತಾದ ಮರುಕ್ಷಣವೇ ಬಿಜೆಪಿ ನಾಯಕರು ಯಡಿಯೂರಪ್ಪನವರಿಗೆ `ನೀವೇ ಮುಖ್ಯಮಂತ್ರಿ ಅಭ್ಯರ್ಥಿ' ಎಂದು ಹೇಳಿ ಕೆಜೆಪಿಯನ್ನು ತಮ್ಮ ಪಕ್ಷದ ಜತೆ ವಿಲೀನಗೊಳಿಸಲೂ ಮನವೊಲಿಸಬಹುದು.
ಯಡಿಯೂರಪ್ಪನವರು ಒಪ್ಪದೆ ಇದ್ದರೆ (ಅಂತಹ ಆಹ್ವಾನವನ್ನು ಯಡಿಯೂರಪ್ಪ ಖಂಡಿತ ತಿರಸ್ಕರಿಸಲಾರರು) ಕೆಜೆಪಿಯನ್ನೇ ಒಡೆದು ಹಾಕಲು ಬಿಜೆಪಿ ಮುಂದಾಗಬಹುದು. ಯಡಿಯೂರಪ್ಪನವರೂ ಸುಮ್ಮನಿರಲಾರರು, ಬಿಜೆಪಿಯನ್ನು ಒಡೆದು ತಮ್ಮ ಬಲ ಹೆಚ್ಚಿಸಿಕೊಳ್ಳಲು ಅವರೂ ಪ್ರಯತ್ನ ಪಡಬಹುದು.
ಇಷ್ಟೇ ಅಲ್ಲ, ಒಂದೊಮ್ಮೆ ಕೆಜೆಪಿ 45-50, ಜೆಡಿ (ಎಸ್) 45-50  ಮತ್ತು ಬಿಎಸ್‌ಆರ್ ಪಕ್ಷ 10-15 ಸ್ಥಾನಗಳನ್ನು ಗೆದ್ದರೆ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೊರಗಿಟ್ಟು ತೃತೀಯರಂಗದ ಪ್ರಯೋಗ ನಡೆಸಲೂ ಅವಕಾಶ ಇದೆ. ಈ ಮೂರು ಪಕ್ಷಗಳ ನಾಯಕರ ಇಲ್ಲಿಯ ವರೆಗಿನ ನಡವಳಿಕೆಗಳನ್ನು ಗಮನಿಸುತ್ತಾ ಬಂದರೆ  ಯಾವುದೇ ನಿರ್ದಿಷ್ಠ ರಾಜಕೀಯ ಸಿದ್ಧಾಂತ ಇಲ್ಲವೇ ಮೌಲ್ಯಗಳ ಬಗ್ಗೆ ಅವರಿಗೆ ಬದ್ಧತೆ ಕಂಡುಬರುವುದಿಲ್ಲ.
ಪರಸ್ಪರ ಎಷ್ಟೇ ಕೆಸರೆರಚಾಡಿಕೊಂಡರೂ ಅಧಿಕಾರ ಹಿಡಿಯಲು ಮತ್ತೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಒಂದಾದರೆ ಆಶ್ಚರ್ಯವೇನಿಲ್ಲ. ಈ ಇಬ್ಬರಿಗೂ ಶ್ರಿರಾಮುಲು ಆತ್ಮೀಯರಾಗಿರುವ ಕಾರಣ ಅವರು ಹೊಂದಿಕೊಳ್ಳುವುದು ಕಷ್ಟ ಅಲ್ಲ. ಮುಂದಿನ ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ತೃತೀಯರಂಗ ಅಧಿಕಾರಕ್ಕೆ ಬರಬಹುದೆಂಬ ಕನಸನ್ನು ಅನೇಕ ಪ್ರಾದೇಶಿಕ ಪಕ್ಷಗಳ ನಾಯಕರು ಕಾಣುತ್ತಿರುವುದರಿಂದ ದೇವೇಗೌಡರು ಕೂಡಾ ಈ ಪ್ರಯೋಗವನ್ನು ಬೆಂಬಲಿಸಬಹುದು.
ಆದರೆ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಖಚಿತವಾಗಿ ನಂಬಿರುವ ಕಾಂಗ್ರೆಸ್ ನಾಯಕರು ಮನೆಹೊಸಿಲಿಗೆ ಬಂದಿರುವ ಅಧಿಕಾರವನ್ನು ಅಷ್ಟು ಸುಲಭದಲ್ಲಿ ಉಳಿದವರು ಅಪಹರಿಸಿಕೊಂಡು ಹೋಗಲು ಬಿಡಲಾರದು. ಅತಂತ್ರ ರಾಜಕೀಯ ಪರಿಸ್ಥಿತಿ ನಿರ್ಮಾಣಗೊಂಡಾಕ್ಷಣ  ಕೆಜೆಪಿ ಇಲ್ಲವೇ ಜೆಡಿ (ಎಸ್) ಜತೆ ಅದು ವ್ಯವಹಾರಕ್ಕೆ ಇಳಿಯಬಹುದು.
ಜೆಡಿ (ಎಸ್)ಗಿಂತಲೂ ಕೆಜೆಪಿಯನ್ನು ಒಲಿಸಿಕೊಳ್ಳುವುದು ಕಾಂಗ್ರೆಸ್‌ಗೆ ಸುಲಭ. ಬಿಜೆಪಿ ತೊರೆದ ನಂತರ ಅವರು `ಸೆಕ್ಯುಲರ್' ಆಗಿರುವುದರಿಂದ ಕೋಮುವಾದಿಗಳ ಜತೆ ಕೈಜೋಡಿಸಿದ ಅಪವಾದವನ್ನು ಕೂಡಾ ಎದುರಿಸಬೇಕಾಗಿಲ್ಲ. ತಲೆಮೇಲೆ ಸಿಬಿಐ ತೂಗುಕತ್ತಿಯನ್ನು ಇಟ್ಟುಕೊಂಡೇ ತಿರುಗಾಡುತ್ತಿರುವ ಯಡಿಯೂರಪ್ಪ ಬಹಳ ಬೇಗ ಕಾಂಗ್ರೆಸ್ ಹಾಕುವ ಗಾಳವನ್ನು ನುಂಗಿಬಿಡಲೂಬಹುದು. ಈ ಎಲ್ಲ ಸಾಧ್ಯತೆಗಳನ್ನು ಗಮನಕ್ಕೆ ತೆಗೆದುಕೊಂಡರೆ ಮುಂದಿನ ವಿಧಾನಸಭಾ ಚುನಾವಣೆಯ ನಂತರ ಬಹುಕಾಲದಿಂದ ಮರೀಚಿಕೆಯಾಗಿದ್ದ ಸುಭದ್ರ ಸರ್ಕಾರವೊಂದು ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಬಹುದೆಂಬ ನಿರೀಕ್ಷೆಯನ್ನು ಇಟ್ಟುಕೊಳ್ಳಲು ಬಹಳ ಕಾರಣಗಳು ಸಿಗುತ್ತಿಲ್ಲ.
ಜೇಮ್ಸ ಮೇನರ್ ಅವರು ರಾಜ್ಯದ ಚುನಾವಣಾ ಇತಿಹಾಸವನ್ನು ಮೆಲುಕುಹಾಕುತ್ತಾ ಕೊನೆಯಲ್ಲಿ ಕರ್ನಾಟಕದ ಜಾಗೃತ ಮತದಾರರನ್ನು ಬಾಯ್ತುಂಬಾ ಹೊಗಳಿದರು. ತನ್ನ ಅಭಿಪ್ರಾಯವನ್ನು ಸಮರ್ಥಿಸಿಕೊಳ್ಳಲು ಅವರು ಉಲ್ಲೇಖಿಸಿದ್ದು 1984ರ ಲೋಕಸಭಾ ಚುನಾವಣೆ ಮತ್ತು 1985ರ ಮಧ್ಯಂತರ ವಿಧಾನಸಭಾ ಚುನಾವಣೆಯನ್ನು.
1984ರ ಡಿಸೆಂಬರ್‌ನಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ ನಾಲ್ಕು ಸ್ಥಾನಗಳನ್ನಷ್ಟೇ ನೀಡಿ ರಾಜ್ಯದ ಆಡಳಿತಾರೂಢ ಜನತಾ ಪಕ್ಷಕ್ಕೆ ಮುಖಭಂಗ ಮಾಡಿದ್ದ ಮತದಾರರು, ಎರಡು ತಿಂಗಳ ನಂತರ ನಡೆದ ವಿಧಾನಸಭಾ ಚುನಾವಣೆಯಲ್ಲಿ 139 ಕ್ಷೇತ್ರಗಳಲ್ಲಿ ಜನತಾ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದರು. `ಭಾರತ ಮಾತ್ರವಲ್ಲ ಬೇರೆ ಯಾವ ದೇಶದಲ್ಲಿಯೂ ಇಂತಹ ನಿದರ್ಶನ ಅಪರೂಪ' ಎಂದು ಅವರು ಬಣ್ಣಿಸಿದರು.
ಕರ್ನಾಟಕದ ಮತದಾರರು ರಾಜ್ಯಕ್ಕೊಂದು ಸುಭದ್ರ ಸರ್ಕಾರ ನೀಡುತ್ತಾರೆ ಎಂಬ ಭರವಸೆ ಅವರ ಮಾತಿನಲ್ಲಿತ್ತು.  ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಮೇ ತಿಂಗಳಲ್ಲಿ ಬರುವುದಾಗಿ ಜೇಮ್ಸ ಮೇನರ್ ಹೇಳಿ ಹೋಗಿದ್ದಾರೆ. ಅವರು ಇಟ್ಟಿರುವ ನಂಬಿಕೆಯನ್ನು ಕರ್ನಾಟಕದ ಜಾಗೃತ ಮತದಾರರು ಉಳಿಸಿಕೊಳ್ಳುತ್ತಾರೆಯೇ ಎಂಬುದನ್ನು ತಿಳಿದುಕೊಳ್ಳಲು ಇನ್ನು ಐದು ತಿಂಗಳು ಕಾಯಬೇಕು.

ಸುಭದ್ರ ಸರ್ಕಾರ ಎಂಬ ಮಾಯಾಮೃಗದ ಬೆನ್ನಟ್ಟಿ... Dec 10 2012


`ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಬಹುದೆಂಬ ನಿರೀಕ್ಷೆಯನ್ನು ಇಟ್ಟುಕೊಂಡ ಏಕೈಕ ಪಕ್ಷ ಕಾಂಗ್ರೆಸ್. ಬಹಿರಂಗ ಘೋಷಣೆಗಳೇನೇ ಇರಲಿ, ಬೇರೆ ಯಾವ ಪಕ್ಷವೂ ಬಹುಮತ ಗಳಿಸಬಹುದೆಂಬ ನಿರೀಕ್ಷೆಯನ್ನು ಅಂತರಂಗದಲ್ಲಿ ಇಟ್ಟುಕೊಂಡ ಹಾಗೆ ಕಾಣುವುದಿಲ್ಲ.
ಹಿಂದಿನ ಯಾವ ಚುನಾವಣೆಯಲ್ಲಿಯೂ ಈ ಪರಿಸ್ಥಿತಿಯನ್ನು ನಾನು ಕಂಡಿರಲಿಲ್ಲ, ಕನಿಷ್ಠ ಎರಡು ಪಕ್ಷಗಳ ನಡುವೆ ಬಹುಮತಕ್ಕಾಗಿ ಒಂದಷ್ಟು ಪೈಪೋಟಿ ಇರುತ್ತಿತ್ತು, ಫಲಿತಾಂಶವನ್ನು ಊಹಿಸುವುದು ಕಷ್ಟವಾಗುತ್ತಿತ್ತು..' ಎಂದು ಹೇಳಿದವರು ಲಂಡನ್‌ನ ಕಾಮನ್‌ವೆಲ್ತ್ ಅಧ್ಯಯನ ಸಂಸ್ಥೆಯ ಪ್ರೊ.ಜೇಮ್ಸ ಮೇನರ್.
ಇತ್ತೀಚೆಗೆ `ಪ್ರಜಾವಾಣಿ' ಕಚೇರಿಗೆ ಬಂದು ನಮ್ಮನ್ನುದ್ದೇಶಿಸಿ ಮಾತನಾಡಿದ ಜೇಮ್ಸ ತನ್ನ ಇತ್ತೀಚಿನ ಸುತ್ತಾಟದಲ್ಲಿ ಕಂಡುಕೊಂಡ ಈ ರಾಜಕೀಯ ಒಳನೋಟವನ್ನು ನೀಡಿದರು. 1972ರಿಂದ ರಾಜ್ಯದಲ್ಲಿ ನಡೆದ ಎಲ್ಲ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಸಮೀಪದಿಂದ ಕಂಡಿರುವ, ಅದರ ವಿಶ್ಲೇಷಣೆಗಳನ್ನು ನಿಖರವಾಗಿ ಮಾಡಿರುವ ಮತ್ತು ಕರ್ನಾಟಕದ ಮೂಲೆಮೂಲೆಗಳನ್ನು ಸುತ್ತಿ ಹೆಚ್ಚು ಕಡಿಮೆ ಕನ್ನಡಿಗರೇ ಆಗಿರುವ ಜೇಮ್ಸ, ಕರ್ನಾಟಕದ ರಾಜಕೀಯದ ಬಗ್ಗೆ ಅಧಿಕಾರಯುತವಾಗಿ ಮಾತನಾಡಬಲ್ಲ ರಾಜಕೀಯ ಪಂಡಿತ. ಅವರು ಹೇಳಿದ್ದನ್ನು ನಂಬಲೇ ಬೇಕು ಆದರೆ..?
ಹಿಂದಿನ ಚುನಾವಣೆಗಳ ಫಲಿತಾಂಶ ಮತ್ತು ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಮುಂದಿಟ್ಟುಕೊಂಡು ನೋಡಿದರೆ ಅಧಿಕಾರದ ಕಡೆಗೆ ಕಾಂಗ್ರೆಸ್ ಹಾದಿ ಸುಲಭದ್ದೆಂದು  ಅನಿಸಿಬಿಡುವುದು ಸಹಜ. ಎಚ್.ಡಿ.ಕುಮಾರಸ್ವಾಮಿಯವರ ವಚನಭಂಗದಿಂದಾಗಿ ಯಡಿಯೂರಪ್ಪನವರ ಪರ ಎದ್ದಿದ್ದ ಅನುಕುಂಪದ ಅಲೆ, ಬಳ್ಳಾರಿಯ ರೆಡ್ಡಿ ಸೋದರರ ದುಡ್ಡಿನ ಬಲ, ತಳಮಟ್ಟದಲ್ಲಿನ ಸಂಘ ಪರಿವಾರದ ಬದ್ದ ಕಾರ್ಯಕರ್ತರ ಜಾಲ ಹಾಗೂ ಪರಿಶಿಷ್ಟ ಜಾತಿಯ ಗುಂಪನ್ನು ಒಡೆದು ಮಾದಿಗರು, ಲಂಬಾಣಿ ಮತ್ತು ಬೋವಿ ಸಮುದಾಯಗಳನ್ನು ಸೆಳೆದುಕೊಂಡ `ಸೋಷಿಯಲ್ ಎಂಜಿನಿಯರಿಂಗ್'- 2008ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣಗಳು. ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಈಗ ಬಿಜೆಪಿ ನಾಯಕರು ಚೀರಿಚೀರಿ ಹೇಳಿದರೂ ಅಂದಿನ ಪರಿಸ್ಥಿತಿ ಈಗ ಇಲ್ಲವೆನ್ನುವುದು ಅವರ ಅಂತರಂಗಕ್ಕೂ ಗೊತ್ತು.
ಯಡಿಯೂರಪ್ಪನವರ ನಿರ್ಗಮನ ಮತ್ತು ರೆಡ್ಡಿ ಸೋದರರ ಜೈಲು ವಾಸದಿಂದಾಗಿ ಈ ಎರಡು ಮೂಲಗಳ ಬಲವನ್ನು ಬಿಜೆಪಿ ಕಳೆದುಕೊಂಡಿದೆ. ಬಿಜೆಪಿಯ ಸೋಲು ನಿಶ್ಚಿತ ಎಂಬುದಕ್ಕೆ ಬೇರೆ ಕಾರಣಗಳು ಬೇಕಿಲ್ಲ. ಆದರೆ ಇದರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬರಬಹುದೇ?
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಶೇಕಡಾ 1.2ರಷ್ಟು ಹೆಚ್ಚು ಮತಗಳನ್ನು ಗಳಿಸಿದ್ದರೂ ಸ್ಥಾನಗಳ ಲೆಕ್ಕದಲ್ಲಿ ಬಿಜೆಪಿಗಿಂತ 30 ಸ್ಥಾನಗಳನ್ನು ಕಡಿಮೆ ಪಡೆದಿತ್ತು.
ಚುನಾವಣಾ ಫಲಿತಾಂಶದ ಈ ಗಣಿತ ಸುಲಭದಲ್ಲಿ ಅರ್ಥವಾಗುವಂತಹದ್ದಲ್ಲ. ಮತಪ್ರಮಾಣಕ್ಕೆ ಅನುಗುಣವಾಗಿ ಸ್ಥಾನಗಳ ಲೆಕ್ಕ ಹಾಕಲಾಗುವುದಿಲ್ಲ. ಸ್ಥಾನಗಳ ಸಂಖ್ಯೆಯನ್ನು ನಿರ್ಧರಿಸುವುದು ಕೇವಲ ಮತಗಳಲ್ಲ, ಅದು ಮತಸಾಂದ್ರತೆ. ಈ ಕಾರಣದಿಂದಾಗಿಯೇ ಹಳೆಮೈಸೂರು ಭಾಗದಲ್ಲಿ ಹೆಚ್ಚು ಜನಪ್ರಿಯವಾಗಿರುವ ಜೆಡಿ(ಎಸ್) ಶೇಕಡಾ 19.44ರಷ್ಟು ಮತಗಳಿಸಿದರೂ 28  ಸ್ಥಾನಗಳನ್ನು ಮತ್ತು ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್ಚು ಜನಪ್ರಿಯವಾಗಿರುವ ಬಿಜೆಪಿ 33.93ರಷ್ಟು ಮತಗಳ ಆಧಾರದಲ್ಲಿ  110 ಸ್ಥಾನಗಳನ್ನು ಗಳಿಸಲು ಸಾಧ್ಯವಾಗಿರುವುದು.
ಕಾಂಗ್ರೆಸ್ ಪಕ್ಷ ಶೇಕಡಾ 35.13ರಷ್ಟು ಮತಗಳನ್ನು ಪಡೆದರೂ 80ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯಲಾಗದಿರುವುದಕ್ಕೂ ಇದೇ ಕಾರಣ. ಕಾಂಗ್ರೆಸ್ ರಾಜ್ಯದ ಎಲ್ಲ ಭಾಗಗಳಲ್ಲಿ ಸಾಮಾನ್ಯವಾದ ಜನ ಬೆಂಬಲ ಹೊಂದಿದ್ದರೆ, ಬಿಜೆಪಿ ಮತ್ತು ಜೆಡಿ (ಎಸ್) ನಿರ್ದಿಷ್ಟ ಪ್ರದೇಶಗಳಲ್ಲಿ ಕಾಂಗ್ರೆಸ್‌ಪಕ್ಷದ ಸರಾಸರಿ ಜನಬೆಂಬಲಕ್ಕಿಂತಲೂ ಹೆಚ್ಚಿನ ಪ್ರಮಾಣದ ಬೆಂಬಲ ಹೊಂದಿವೆ.
ಯಡಿಯೂರಪ್ಪನವರ ನಿರ್ಗಮನದಿಂದ ಬಿಜೆಪಿ ಶಕ್ತಿ ಕುಂದಲಿರುವುದು ಖಾತರಿ. ಆದರೆ ಬಿಜೆಪಿ ಬುಟ್ಟಿಯಿಂದ ಜಿಗಿದ ಮತಗಳು ನೇರವಾಗಿ ಕಾಂಗ್ರೆಸ್ ಮಡಿಲಿಗೆ ಬೀಳುವುದೇ ಇಲ್ಲವೆ ಅದು ಯಡಿಯೂರಪ್ಪನವರ ಕಡೆಗೆ ಹೋಗಲಿದೆಯೇ ಎನ್ನುವುದು ಪ್ರಶ್ನೆ. ಬಹುಶಃ ಈ ಪ್ರಶ್ನೆಯೇ ಮುಂದಿನ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸಲಿದೆ.
ಬಿಜೆಪಿಯಿಂದ ಸಿಡಿದುಹೋಗಲಿರುವುದು ಬಹುತೇಕ ಲಿಂಗಾಯತ ಮತಗಳು. ಅವುಗಳು ಯಡಿಯೂರಪ್ಪನವರ ಕಡೆಗೆ ಹೋಗುವ ಸಾಧ್ಯತೆಯೇ ಹೆಚ್ಚು. ಈ `ಮತಾಂತರ'ದಿಂದ ಯಾರಿಗೆ ಎಷ್ಟು ಲಾಭ? ಕಾಂಗ್ರೆಸ್ ಹೆಚ್ಚುವರಿ ಸ್ಥಾನಗಳನ್ನು ಗಳಿಸಲು ಸಾಧ್ಯವಾಗಬಹುದೇ? ಯಡಿಯೂರಪ್ಪನವರ ಪಕ್ಷವನ್ನು ನಿರ್ಣಾಯಕ ಸ್ಥಾನದಲ್ಲಿ ಕೊಂಡೊಯ್ದು ನಿಲ್ಲಿಸಬಹುದೇ?
ಯಡಿಯೂರಪ್ಪನವರೇ ಬಿಜೆಪಿಯಿಂದ ಒಂದಷ್ಟು ಮತಗಳನ್ನು ಕಿತ್ತುಕೊಂಡರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭವಾಗಲಾರದು. ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಜೆಪಿಯಿಂದ ಹೊರಹೋಗುವ ಮತಗಳು ತಮ್ಮ ಬುಟ್ಟಿಗೆ ಬಂದು ಬೀಳುವಂತೆ ಕಾಂಗ್ರೆಸ್ ಪಕ್ಷ ಮಾಡಬೇಕಾಗುತ್ತದೆ. ಅದೇ ರೀತಿ ಬಿಜೆಪಿಯಿಂದ ಕಿತ್ತುಕೊಂಡ ಮತಗಳಿಂದಲೇ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಲು ಯಡಿಯೂರಪ್ಪನವರಿಗೂ ಸಾಧ್ಯವಾಗಲಾರದು.
ಲಿಂಗಾಯತರೆಲ್ಲರೂ ಮತಹಾಕಿದರೂ ಅದು ಶೇಕಡಾ ಹದಿನೈದರ ಪ್ರಮಾಣವನ್ನು ದಾಟುವುದಿಲ್ಲ, ಉತ್ತರ ಕರ್ನಾಟಕದ ಕೆಲವು ನಿರ್ದಿಷ್ಟ ಕ್ಷೇತ್ರಗಳಲ್ಲಿ ಲಿಂಗಾಯತರ ಜನಸಂಖ್ಯೆ ಶೇಕಡಾ 20-25ರಷ್ಟಿದೆ ಎಂದಿಟ್ಟುಕೊಂಡರೂ ಅವರೆಲ್ಲರೂ ಕಣ್ಣುಮುಚ್ಚಿ ಯಡಿಯೂರಪ್ಪನವರ ಪಕ್ಷಕ್ಕೆ ಮತಹಾಕಲಿದ್ದಾರೆ ಎಂಬ ಖಾತರಿ ಇಲ್ಲ. ಕನಿಷ್ಠ ಶೇಕಡಾ 25ರಿಂದ 30ರಷ್ಟು ಮತಗಳನ್ನು ಪಡೆಯದೆ ಸ್ಥಾನಗಳನ್ನು ಗೆಲ್ಲುವುದು ಕಷ್ಟ. ಇದಕ್ಕಾಗಿ ಎಲ್ಲ ಜಾತಿ-ಧರ್ಮಗಳ ಮತದಾರರ ಬೆಂಬಲ ಅಗತ್ಯ.
ಯಡಿಯೂರಪ್ಪನವರು ಅದೇ ಪ್ರಯತ್ನದಲ್ಲಿದ್ದಾರೆ.  ಯಡಿಯೂರಪ್ಪನವರ ಬಂಡಾಯ ಬಿಜೆಪಿ ಸೋಲಿನಲ್ಲಿ ಕೊನೆಗೊಳ್ಳಬಹುದು, ಆದರೆ ಕೆಜೆಪಿ ಇಲ್ಲವೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಾಗಬಹುದು ಎಂದು ಹೇಳಲು ಸಾಧ್ಯ ಇಲ್ಲ.ಹೀಗಾದರೆ ಸುಭದ್ರ ಸರ್ಕಾರ ಸಾಧ್ಯವೇ? ಯಾವುದಾದರೂ ಒಂದು ಪಕ್ಷ 113 ಸ್ಥಾನಗಳನ್ನು ಗಳಿಸಿದರೆ ಇದು ಸಾಧ್ಯವಾಗಬಹುದು.
ಜೇಮ್ಸ ಮೇನರ್ ಪ್ರಕಾರ  ಸದ್ಯಕ್ಕೆ ಅಂತಹ ಅವಕಾಶ ಇರುವುದು ಕಾಂಗ್ರೆಸ್ ಪಕ್ಷಕ್ಕೆ. ಆದರೆ ಕಾಂಗ್ರೆಸ್ ಪಕ್ಷವೂ ಸೇರಿದಂತೆ ಯಾವ ಪಕ್ಷವೂ ನೂರರ ಗಡಿಯನ್ನು ದಾಟದೆ ಹೋದರೆ? ಉದಾಹರಣೆಗೆ ಕಾಂಗ್ರೆಸ್ ಪಕ್ಷ 90-95, ಬಿಜೆಪಿ 60-65, ಬಿ.ಎಸ್.ಯಡಿಯೂರಪ್ಪ 30-35, ಜೆಡಿ (ಎಸ್) 30-35 ಮತ್ತು ಬಿಎಸ್‌ಆರ್ ಪಕ್ಷ ಹಾಗೂ ಪಕ್ಷೇತರರು 10-15 ಸ್ಥಾನಗಳನ್ನು ಗಳಿಸಿದರೆ ಸುಲಭದಲ್ಲಿ ಸರ್ಕಾರ ರಚಿಸುವುದು ಸಾಧ್ಯವಾದೀತೇ? ಅತ್ಯಧಿಕ ಸ್ಥಾನಗಳನ್ನು ಹೊಂದಿರುವ ಪಕ್ಷಕ್ಕೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡುವುದು ರೂಢಿಯಾಗಿರುವ ಕಾರಣ ಮತ್ತು ರಾಜಭವನದಲ್ಲಿ ಅನುಕೂಲಕರ ರಾಜ್ಯಪಾಲರೇ ಕೂತಿರುವುದರಿಂದ  ಸರ್ಕಾರ ರಚನೆಗೆ ಆಹ್ವಾನ ಪಡೆಯುವುದು ಆಗಲೂ ಕಾಂಗ್ರೆಸ್ ಪಕ್ಷಕ್ಕೆ ಕಷ್ಟ ಅಲ್ಲ.
ಯಾರಿಗೂ ಸ್ಪಷ್ಟ ಬಹುಮತ ಇಲ್ಲದೆ ಇರುವ ಇಂತಹ ಸಂದರ್ಭದಲ್ಲಿ ಬಗೆಬಗೆಯ ಆಪರೇಷನ್‌ಗಳು ನಡೆಯಲಿರುವುದು ಖಂಡಿತ. ಹೆಚ್ಚು ಸ್ಥಾನಗಳನ್ನು ಹೊಂದಿರುವ ಮತ್ತು ಕೇಂದ್ರದಲ್ಲಿಯೂ ಅಧಿಕಾರದಲ್ಲಿರುವ ಕಾರಣಗಳಿಂದಾಗಿ ಕಾಂಗ್ರೆಸ್ ನಡೆಸುವ `ಆಪರೇಷನ್'ಗಳಿಗೆ ಯಶಸ್ಸು ಸಿಗುವ ಸಾಧ್ಯತೆ ಹೆಚ್ಚಿದ್ದರೂ ಉಳಿದ ಪಕ್ಷಗಳೂ ಕೈಕಟ್ಟಿ ಕೂರಲಾರವು.
ಯಡಿಯೂರಪ್ಪನವರು ಬಿಜೆಪಿಯನ್ನು ತೊರೆದು ಬಂದಿರಬಹುದು, ಬಿಜೆಪಿ ನಾಯಕರನ್ನು ಮನಸಾರೆ ನಿಂದಿಸಿರಬಹುದು, ಅಷ್ಟೇ ಕೆಟ್ಟದಾಗಿ ಯಡಿಯೂರಪ್ಪ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಮಾತನಾಡಿರಬಹುದು. ಆದರೆ ಮುಂದಿನ ಚುನಾವಣೆಯ ಫಲಿತಾಂಶದ ನಂತರ ಪರಸ್ಪರ ಒಟ್ಟಾಗುವುದರಿಂದ ಅಧಿಕಾರ ಹಿಡಿಯುವುದು ಸಾಧ್ಯ ಎಂದು ಗೊತ್ತಾದ ಮರುಕ್ಷಣವೇ ಬಿಜೆಪಿ ನಾಯಕರು ಯಡಿಯೂರಪ್ಪನವರಿಗೆ `ನೀವೇ ಮುಖ್ಯಮಂತ್ರಿ ಅಭ್ಯರ್ಥಿ' ಎಂದು ಹೇಳಿ ಕೆಜೆಪಿಯನ್ನು ತಮ್ಮ ಪಕ್ಷದ ಜತೆ ವಿಲೀನಗೊಳಿಸಲೂ ಮನವೊಲಿಸಬಹುದು.
ಯಡಿಯೂರಪ್ಪನವರು ಒಪ್ಪದೆ ಇದ್ದರೆ (ಅಂತಹ ಆಹ್ವಾನವನ್ನು ಯಡಿಯೂರಪ್ಪ ಖಂಡಿತ ತಿರಸ್ಕರಿಸಲಾರರು) ಕೆಜೆಪಿಯನ್ನೇ ಒಡೆದು ಹಾಕಲು ಬಿಜೆಪಿ ಮುಂದಾಗಬಹುದು. ಯಡಿಯೂರಪ್ಪನವರೂ ಸುಮ್ಮನಿರಲಾರರು, ಬಿಜೆಪಿಯನ್ನು ಒಡೆದು ತಮ್ಮ ಬಲ ಹೆಚ್ಚಿಸಿಕೊಳ್ಳಲು ಅವರೂ ಪ್ರಯತ್ನ ಪಡಬಹುದು.
ಇಷ್ಟೇ ಅಲ್ಲ, ಒಂದೊಮ್ಮೆ ಕೆಜೆಪಿ 45-50, ಜೆಡಿ (ಎಸ್) 45-50  ಮತ್ತು ಬಿಎಸ್‌ಆರ್ ಪಕ್ಷ 10-15 ಸ್ಥಾನಗಳನ್ನು ಗೆದ್ದರೆ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೊರಗಿಟ್ಟು ತೃತೀಯರಂಗದ ಪ್ರಯೋಗ ನಡೆಸಲೂ ಅವಕಾಶ ಇದೆ. ಈ ಮೂರು ಪಕ್ಷಗಳ ನಾಯಕರ ಇಲ್ಲಿಯ ವರೆಗಿನ ನಡವಳಿಕೆಗಳನ್ನು ಗಮನಿಸುತ್ತಾ ಬಂದರೆ  ಯಾವುದೇ ನಿರ್ದಿಷ್ಠ ರಾಜಕೀಯ ಸಿದ್ಧಾಂತ ಇಲ್ಲವೇ ಮೌಲ್ಯಗಳ ಬಗ್ಗೆ ಅವರಿಗೆ ಬದ್ಧತೆ ಕಂಡುಬರುವುದಿಲ್ಲ.
ಪರಸ್ಪರ ಎಷ್ಟೇ ಕೆಸರೆರಚಾಡಿಕೊಂಡರೂ ಅಧಿಕಾರ ಹಿಡಿಯಲು ಮತ್ತೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಒಂದಾದರೆ ಆಶ್ಚರ್ಯವೇನಿಲ್ಲ. ಈ ಇಬ್ಬರಿಗೂ ಶ್ರಿರಾಮುಲು ಆತ್ಮೀಯರಾಗಿರುವ ಕಾರಣ ಅವರು ಹೊಂದಿಕೊಳ್ಳುವುದು ಕಷ್ಟ ಅಲ್ಲ. ಮುಂದಿನ ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ತೃತೀಯರಂಗ ಅಧಿಕಾರಕ್ಕೆ ಬರಬಹುದೆಂಬ ಕನಸನ್ನು ಅನೇಕ ಪ್ರಾದೇಶಿಕ ಪಕ್ಷಗಳ ನಾಯಕರು ಕಾಣುತ್ತಿರುವುದರಿಂದ ದೇವೇಗೌಡರು ಕೂಡಾ ಈ ಪ್ರಯೋಗವನ್ನು ಬೆಂಬಲಿಸಬಹುದು.
ಆದರೆ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಖಚಿತವಾಗಿ ನಂಬಿರುವ ಕಾಂಗ್ರೆಸ್ ನಾಯಕರು ಮನೆಹೊಸಿಲಿಗೆ ಬಂದಿರುವ ಅಧಿಕಾರವನ್ನು ಅಷ್ಟು ಸುಲಭದಲ್ಲಿ ಉಳಿದವರು ಅಪಹರಿಸಿಕೊಂಡು ಹೋಗಲು ಬಿಡಲಾರದು. ಅತಂತ್ರ ರಾಜಕೀಯ ಪರಿಸ್ಥಿತಿ ನಿರ್ಮಾಣಗೊಂಡಾಕ್ಷಣ  ಕೆಜೆಪಿ ಇಲ್ಲವೇ ಜೆಡಿ (ಎಸ್) ಜತೆ ಅದು ವ್ಯವಹಾರಕ್ಕೆ ಇಳಿಯಬಹುದು.
ಜೆಡಿ (ಎಸ್)ಗಿಂತಲೂ ಕೆಜೆಪಿಯನ್ನು ಒಲಿಸಿಕೊಳ್ಳುವುದು ಕಾಂಗ್ರೆಸ್‌ಗೆ ಸುಲಭ. ಬಿಜೆಪಿ ತೊರೆದ ನಂತರ ಅವರು `ಸೆಕ್ಯುಲರ್' ಆಗಿರುವುದರಿಂದ ಕೋಮುವಾದಿಗಳ ಜತೆ ಕೈಜೋಡಿಸಿದ ಅಪವಾದವನ್ನು ಕೂಡಾ ಎದುರಿಸಬೇಕಾಗಿಲ್ಲ. ತಲೆಮೇಲೆ ಸಿಬಿಐ ತೂಗುಕತ್ತಿಯನ್ನು ಇಟ್ಟುಕೊಂಡೇ ತಿರುಗಾಡುತ್ತಿರುವ ಯಡಿಯೂರಪ್ಪ ಬಹಳ ಬೇಗ ಕಾಂಗ್ರೆಸ್ ಹಾಕುವ ಗಾಳವನ್ನು ನುಂಗಿಬಿಡಲೂಬಹುದು. ಈ ಎಲ್ಲ ಸಾಧ್ಯತೆಗಳನ್ನು ಗಮನಕ್ಕೆ ತೆಗೆದುಕೊಂಡರೆ ಮುಂದಿನ ವಿಧಾನಸಭಾ ಚುನಾವಣೆಯ ನಂತರ ಬಹುಕಾಲದಿಂದ ಮರೀಚಿಕೆಯಾಗಿದ್ದ ಸುಭದ್ರ ಸರ್ಕಾರವೊಂದು ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಬಹುದೆಂಬ ನಿರೀಕ್ಷೆಯನ್ನು ಇಟ್ಟುಕೊಳ್ಳಲು ಬಹಳ ಕಾರಣಗಳು ಸಿಗುತ್ತಿಲ್ಲ.
ಜೇಮ್ಸ ಮೇನರ್ ಅವರು ರಾಜ್ಯದ ಚುನಾವಣಾ ಇತಿಹಾಸವನ್ನು ಮೆಲುಕುಹಾಕುತ್ತಾ ಕೊನೆಯಲ್ಲಿ ಕರ್ನಾಟಕದ ಜಾಗೃತ ಮತದಾರರನ್ನು ಬಾಯ್ತುಂಬಾ ಹೊಗಳಿದರು. ತನ್ನ ಅಭಿಪ್ರಾಯವನ್ನು ಸಮರ್ಥಿಸಿಕೊಳ್ಳಲು ಅವರು ಉಲ್ಲೇಖಿಸಿದ್ದು 1984ರ ಲೋಕಸಭಾ ಚುನಾವಣೆ ಮತ್ತು 1985ರ ಮಧ್ಯಂತರ ವಿಧಾನಸಭಾ ಚುನಾವಣೆಯನ್ನು.
1984ರ ಡಿಸೆಂಬರ್‌ನಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ ನಾಲ್ಕು ಸ್ಥಾನಗಳನ್ನಷ್ಟೇ ನೀಡಿ ರಾಜ್ಯದ ಆಡಳಿತಾರೂಢ ಜನತಾ ಪಕ್ಷಕ್ಕೆ ಮುಖಭಂಗ ಮಾಡಿದ್ದ ಮತದಾರರು, ಎರಡು ತಿಂಗಳ ನಂತರ ನಡೆದ ವಿಧಾನಸಭಾ ಚುನಾವಣೆಯಲ್ಲಿ 139 ಕ್ಷೇತ್ರಗಳಲ್ಲಿ ಜನತಾ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದರು. `ಭಾರತ ಮಾತ್ರವಲ್ಲ ಬೇರೆ ಯಾವ ದೇಶದಲ್ಲಿಯೂ ಇಂತಹ ನಿದರ್ಶನ ಅಪರೂಪ' ಎಂದು ಅವರು ಬಣ್ಣಿಸಿದರು.
ಕರ್ನಾಟಕದ ಮತದಾರರು ರಾಜ್ಯಕ್ಕೊಂದು ಸುಭದ್ರ ಸರ್ಕಾರ ನೀಡುತ್ತಾರೆ ಎಂಬ ಭರವಸೆ ಅವರ ಮಾತಿನಲ್ಲಿತ್ತು.  ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಮೇ ತಿಂಗಳಲ್ಲಿ ಬರುವುದಾಗಿ ಜೇಮ್ಸ ಮೇನರ್ ಹೇಳಿ ಹೋಗಿದ್ದಾರೆ. ಅವರು ಇಟ್ಟಿರುವ ನಂಬಿಕೆಯನ್ನು ಕರ್ನಾಟಕದ ಜಾಗೃತ ಮತದಾರರು ಉಳಿಸಿಕೊಳ್ಳುತ್ತಾರೆಯೇ ಎಂಬುದನ್ನು ತಿಳಿದುಕೊಳ್ಳಲು ಇನ್ನು ಐದು ತಿಂಗಳು ಕಾಯಬೇಕು.

Monday, December 3, 2012

ಕೇಜ್ರಿವಾಲ್ ಗೆಲ್ಲಬೇಕು ನಿಜ, ಗೆಲ್ಲಿಸುವವರು ಯಾರು? Dec 02 2012


`ರಾಜಕಾರಣಿಗಳ ವಿರುದ್ಧ ಆರೋಪ ಮಾಡುವುದು ಸುಲಭ, ತಾಕತ್ತಿದ್ದರೆ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟು ನೋಡಿ. ಆ ಶಕ್ತಿ ನಿಮಗಿದೆಯೇ?' ಎಂದು ನಮ್ಮ ವೃತ್ತಿಪರ ರಾಜಕಾರಣಿಗಳು, ಅವರ ವಿರುದ್ಧ ಬರೆಯುವ ಪತ್ರಕರ್ತರು ಮತ್ತು ಹೋರಾಟ ನಡೆಸುವ ಸಾಮಾಜಿಕ ಕಾರ್ಯಕರ್ತರನ್ನು ಆಗಾಗ ಕಿಚಾಯಿಸುವುದುಂಟು.
ಕಳೆದೆರಡು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ರಾಷ್ಟ್ರೀಯ ಸಮರವನ್ನು ನಡೆಸುತ್ತಿರುವ ಅರವಿಂದ್ ಕೇಜ್ರಿವಾಲ್ ಮತ್ತು ಸಂಗಾತಿಗಳ `ಎದೆ ಮೇಲೆ ಬಂದೂಕು ಇಟ್ಟು' ನಮ್ಮ ಜನಪ್ರಿಯ ರಾಜಕೀಯ ಪಕ್ಷಗಳು ಕೇಳಿದ್ದು ಇದೇ ಪ್ರಶ್ನೆಯನ್ನು. ಕೇಜ್ರಿವಾಲ್ ತಂಡ ಹಿಂದೆ ಸರಿಯಲಿಲ್ಲ, `ಬಂದೂಕಿನೊಳಗಿನ ಗುಂಡನ್ನು ನುಂಗಿಬಿಟ್ಟಿದೆ'. ತಲೆಗೆ ಗಾಂಧಿ ಟೋಪಿಯೇರಿಸಿ `ಆಮ್ ಆದ್ಮಿ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ಹುಟ್ಟುಹಾಕಿದೆ.
ಚುನಾವಣಾ ಆಯೋಗದಲ್ಲಿ ನೋಂದಣಿಗೊಂಡ ಸುಮಾರು ಮುನ್ನೂರು ಪಕ್ಷಗಳಿವೆ. ರಾಷ್ಟ್ರೀಯ, ಪ್ರಾದೇಶಿಕ, ಜಾತೀಯ.. ಹೀಗೆ ತರಹೇವಾರಿ ರಾಜಕೀಯ ಪಕ್ಷಗಳಿವೆ. ವೃತ್ತಿಪರ ರಾಜಕಾರಣಿಗಳನ್ನು ದೂರ ಇಟ್ಟು ದಲಿತರು, ರೈತರು, ಕಾರ್ಮಿಕರು ಪ್ರತ್ಯೇಕ ಪಕ್ಷಗಳನ್ನು ಕಟ್ಟುವ ಪ್ರಯತ್ನ ಕೂಡಾ ನಡೆಸಿದ್ದುಂಟು.
ಇವುಗಳಲ್ಲಿ ಎರಡಂಕಿಯಷ್ಟು ಶೇಕಡಾವಾರು ಮತಗಳಿಸಿರುವ ರಾಜಕೀಯ ಪಕ್ಷಗಳು ಮಾತ್ರ ಬೆರಳೆಣಿಕೆಯಷ್ಟು. `ನಿನ್ನೆಯ ಮಳೆಗೆ ಹುಟ್ಟಿ ಇವತ್ತಿನ ಬಿಸಿಲಿಗೆ ಸತ್ತುಹೋದ' ಪಕ್ಷಗಳೇ ಹೆಚ್ಚು. ಭಾರತದ ನೆಲದಲ್ಲಿ `ಆಮ್ ಆದ್ಮಿ ಪಾರ್ಟಿ' ಹಲವು ಕಾರಣಗಳಿಗಾಗಿ ಒಂದು ಹೊಸ ಪ್ರಯೋಗ. ಇತಿಹಾಸದ ಪುಟಗಳಲ್ಲಿ ಇಂತಹದ್ದೊಂದು ಪ್ರಯತ್ನ ಕಂಡುಬರುವುದು ಎಪ್ಪತ್ತರ ದಶಕದ ಕೊನೆಭಾಗದಲ್ಲಿ ಜಯಪ್ರಕಾಶ್ ನಾರಾಯಣ್ ಮಾರ್ಗದರ್ಶನದಲ್ಲಿ ನಿರ್ಮಾಣಗೊಂಡ ಪರ್ಯಾಯ ರಾಜಕೀಯ ಶಕ್ತಿಯಲ್ಲಿ ಮಾತ್ರ.
ಆಗ ಅಸ್ತಿತ್ವಕ್ಕೆ ಬಂದಿದ್ದ ಜನತಾ ಪಕ್ಷ ಎನ್ನುವುದು ಜೇಪಿ ನೇತೃತ್ವದ `ಸಂಪೂರ್ಣ ಕ್ರಾಂತಿ' ಎಂಬ ಚಳವಳಿಯ ಉತ್ಪನ್ನ. ಅಣ್ಣಾ ಹಜಾರೆ ನೇತೃತ್ವದಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಚಳವಳಿ ಅಲ್ಲಲ್ಲಿ ಜೇಪಿ ಚಳವಳಿಯನ್ನು ನೆನೆಪಿಸಿದರೂ ಜಯಪ್ರಕಾಶ್ ನಾರಾಯಣ್ ಅವರಿಗಿದ್ದ ಸೈದ್ಧಾಂತಿಕ ತಿಳಿವಳಿಕೆ,ಹೋರಾಟದ ಹಾದಿ ಬಗೆಗಿನ ಸ್ಪಷ್ಟತೆ ಮತ್ತು ವರ್ಚಸ್ಸಿನ ನಾಯಕತ್ವ ಹಜಾರೆ ಅವರಿಗೆ ಇಲ್ಲ.
ಇವೆಲ್ಲಕ್ಕಿಂತಲೂ ಮುಖ್ಯವಾಗಿ ಅದು ಸಂಪೂರ್ಣವಾಗಿ ರಾಜಕೀಯ ಚಳವಳಿಯಾಗಿತ್ತು. ಅದಕ್ಕಿದ್ದ ರಾಜಕೀಯ ಮುಖವನ್ನು ಯಾರೂ ಮುಚ್ಚಿಟ್ಟಿರಲಿಲ್ಲ. ಕಾಂಗ್ರೆಸ್ ವಿರೋಧಿ ರಾಜಕೀಯ ಪಕ್ಷಗಳೆಲ್ಲವೂ ಬಹಿರಂಗವಾಗಿ ಅದರಲ್ಲಿ ಪಾಲ್ಗೊಂಡಿದ್ದವು. ಆದುದರಿಂದ ಚಳವಳಿ ರಾಜಕೀಯ ಪಕ್ಷದ ರೂಪ ಪಡೆದಾಗ ಸಂಘಟನೆಯ ಸಮಸ್ಯೆ ಅದನ್ನು ಕಾಡಿರಲಿಲ್ಲ.
ಅರವಿಂದ್ ಕೇಜ್ರಿವಾಲ್ ನೇತೃತ್ವದ `ಆಮ್ ಆದ್ಮಿ ಪಾರ್ಟಿ' ಎನ್ನುವುದು `ರಾಜಕೀಯ ವಿರೋಧಿ ರಾಜಕೀಯ ಪಕ್ಷ'. ಶಾಂತಿಭೂಷಣ್ ಅವರನ್ನೊಬ್ಬರನ್ನು ಹೊರತುಪಡಿಸಿದರೆ ಈ ಪಕ್ಷದ ನಾಯಕರಲ್ಲಿ ಯಾರೂ ರಾಜಕೀಯ ಪಕ್ಷಗಳಿಂದ ಬಂದವರಲ್ಲ. ಈ ರೀತಿಯ `ರಾಜಕೀಯ ವಿರೋಧಿ ಚಹರೆ'ಯಿಂದ ಲಾಭ ಮತ್ತು ನಷ್ಟ ಎರಡೂ ಇವೆ. ಈಗಿನ ರಾಜಕೀಯ ವ್ಯವಸ್ಥೆಯನ್ನು ದ್ವೇಷಿಸುವ ದೊಡ್ಡ ಜನಸಮುದಾಯ ದೇಶದಲ್ಲಿದೆ.
ಅವರ ಬೆಂಬಲದ ಲಾಭವನ್ನು ಪಕ್ಷ ಪಡೆಯಬಹುದು. ನಷ್ಟವೂ ಇದೆ. ರಾಜಕೀಯ ಪಕ್ಷ ಎನ್ನುವುದು ಏಕವ್ಯಕ್ತಿ ಪ್ರದರ್ಶನ ಅಲ್ಲ, ಅದೊಂದು ಸಾಮೂಹಿಕ ಪ್ರಯತ್ನ. ಇದಕ್ಕಾಗಿ ನಿಷ್ಠಾವಂತ ಕಾರ್ಯಕರ್ತರನ್ನೊಳಗೊಂಡ ಸಂಘಟನೆಯ ಬಲ ಬೇಕಾಗುತ್ತದೆ. ಕೇಜ್ರಿವಾಲ್ ಪಕ್ಷ ವೃತ್ತಿಪರ ರಾಜಕಾರಣಿಗಳನ್ನು ಅಸ್ಪೃಶ್ಯರಂತೆಯೇ ಕಾಣುತ್ತಾ ಬಂದಿರುವುದರಿಂದ ಅನಿವಾರ್ಯವಾಗಿ ಹೊಸ ಮುಖಗಳನ್ನೇ ಹುಡುಕಾಡಬೇಕಾಗಿದೆ.
ರಾಜಕೀಯ ಪಕ್ಷವೊಂದು ಯಶಸ್ಸನ್ನು ಕಾಣಬೇಕಾದರೆ ಅದರ ಖಾತೆಯಲ್ಲಿ ಬೆಂಬಲದ ಖಾತರಿ ಉಳ್ಳ ಒಂದು ಮತವರ್ಗ ಇರಬೇಕಾಗುತ್ತದೆ. ಈ ಜನಬೆಂಬಲದ `ಠೇವಣಿ'ಯನ್ನು ಇಟ್ಟುಕೊಂಡು ಅದು ಹೊಸ ಬೆಂಬಲಿಗರನ್ನು ಸೇರ್ಪಡೆಗೊಳಿಸುತ್ತಾ ಬೆಳೆಯಬೇಕಾಗುತ್ತದೆ. ಕಾಂಗ್ರೆಸ್ ಪಕ್ಷ ಪ್ರಾರಂಭದಿಂದಲೂ `ಬಡವರು' ಎಂಬ ಸಾಮಾನ್ಯ ಮತಕ್ಷೇತ್ರವನ್ನು ಪೋಷಿಸುತ್ತಾ ಬಂದಿದೆ.
ಅದಕ್ಕೆ ಪರ್ಯಾಯವಾಗಿ ಹುಟ್ಟಿಕೊಂಡ ಭಾರತೀಯ ಜನತಾ ಪಕ್ಷ `ಹಿಂದೂ' ಮತಕ್ಷೇತ್ರವನ್ನು ಆರಿಸಿಕೊಂಡಿದೆ. ಈ ರೀತಿ `ಆಮ್ ಆದ್ಮಿ ಪಾರ್ಟಿ'ಯ ಮೂಲ ಮತಬ್ಯಾಂಕ್ ಯಾವುದು? ಪಕ್ಷದ ಹೆಸರನ್ನು ನೋಡಿದರೆ ಅದು `ಸಾಮಾನ್ಯಜನತೆ'ಯನ್ನು ಗುರಿಯಾಗಿಟ್ಟುಕೊಂಡಂತೆ ಕಾಣುತ್ತಿರುವುದು ನಿಜ.
ಆದರೆ ಅಣ್ಣಾಹಜಾರೆ ಮತ್ತು ಕೇಜ್ರಿವಾಲ್ ಜತೆಗೂಡಿ ನಡೆಸಿದ್ದ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಬಹುಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದುದು `ಸಾಮಾನ್ಯ ಜನತೆ' ಅಲ್ಲ, ಅದು `ಮಧ್ಯಮ ವರ್ಗ'. ಒಂದು ಕಾಲದಲ್ಲಿ `ಆಮ್‌ಆದ್ಮಿ' ಗುಂಪಿನಲ್ಲಿಯೇ ಇದ್ದ `ಮಧ್ಯಮ ವರ್ಗ' ಆರ್ಥಿಕ ಉದಾರೀಕರಣದ ಯುಗದ ನಂತರ ಸಿಡಿದು ಹೊರಬಂದಿದೆ. ಈಗ ಇವೆರಡೂ ಒಂದೇ ಎಂದು ಹೇಳಲಾಗುವುದಿಲ್ಲ.
ಈ `ಮಧ್ಯಮ ವರ್ಗ' ಬೀದಿಗಿಳಿದು ಬೆವರು ಸುರಿಸಿ ಕೇಜ್ರಿವಾಲ್ ಪಕ್ಷಕ್ಕಾಗಿ ದುಡಿಯುವವರಲ್ಲ. ಇವರಲ್ಲಿ ಹೆಚ್ಚಿನವರು `ಆರಾಮ ಕುರ್ಚಿಯ ದೇಶಭಕ್ತರು'. ಇವರು ಚುನಾವಣೆಯ ದಿನ ಮನೆಯಿಂದ ಹೊರಬಂದು ಮತಚಲಾಯಿಸಿದರೆ ಅದೇ ದೊಡ್ಡ ದೇಶಸೇವೆ.
ಕೇಜ್ರಿವಾಲ್ ಪಕ್ಷದ ಭವಿಷ್ಯದ ಕಾರ್ಯಸೂಚಿಯ ನೋಟವನ್ನು ನೀಡುವ `ಮುನ್ನೋಟದ ದಾಖಲೆ'ಯನ್ನು ಓದಿದರೆ ಅದು ಸಂಪೂರ್ಣವಾಗಿ `ಆಮ್ ಆದ್ಮಿ'ಯ ಪರವಾಗಿಯೇ ಇದ್ದಂತೆ ಕಾಣುತ್ತಿದೆ. `ಅಭಿವೃದ್ಧಿಗೆ `ಬಂಡವಾಳದ ತರ್ಕ' ಮತ್ತು `ಮುಕ್ತ ಮಾರುಕಟ್ಟೆ'ಯ ನೀತಿ ಅಲ್ಲ, `ಸಮಾನತೆ' ಮತ್ತು ಸಮಾಜದ ಕಟ್ಟಕಡೆಯ ಮನುಷ್ಯನ ಕಲ್ಯಾಣ' ಪ್ರೇರಣೆಯಾಗಬೇಕು' ಎಂದು ಪಕ್ಷದ `ಮುನ್ನೋಟದ ದಾಖಲೆ' ಹೇಳಿದೆ.
ಈ ದಾಖಲೆಯ ಆಧಾರದ ಆರ್ಥಿಕ ನೀತಿಯನ್ನು ಕೇಜ್ರಿವಾಲ್ ಬೆಂಬಲಕ್ಕೆ ನಿಂತಿರುವ ಆರ್ಥಿಕ ಉದಾರೀಕರಣದ ಉತ್ಪನ್ನವಾದ `ಮಧ್ಯಮವರ್ಗ' ಒಪ್ಪುತ್ತದೆಯೇ? ಇದು ಕೇಜ್ರಿವಾಲ್ ರಾಜಕೀಯದಲ್ಲಿ ಮೇಲ್ನೋಟಕ್ಕೆ ಕಾಣುವ ವೈರುದ್ಧ್ಯ, ಬಹುಶಃ ಮುಂದಿನ ದಿನಗಳಲ್ಲಿ ಅವರು ಎದುರಿಸಬೇಕಾಗಿರುವ ಬಿಕ್ಕಟ್ಟು ಕೂಡಾ.
ಇಷ್ಟು ಮಾತ್ರ ಅಲ್ಲ, `ಆಮ್‌ಆದ್ಮಿ ಪಾರ್ಟಿ'ಯ ರಾಜಕೀಯ ಸಿದ್ಧಾಂತ ಏನು ಎನ್ನುವುದು ಯಾರಿಗೂ ಗೊತ್ತಿಲ್ಲ. ಸಮಾಜವಾದದಿಂದ ಹಿಡಿದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರೆಗೆ ಹಲವಾರು `ಸೈದ್ಧಾಂತಿಕ ಶಾಲೆಗಳ ವಿದ್ಯಾರ್ಥಿಗಳು' ಈ ಪಕ್ಷದಲ್ಲಿದ್ದಾರೆ. ಚುನಾವಣೆ ಎನ್ನುವುದು ಕೇವಲ ಜನಲೋಕಪಾಲ ಮಸೂದೆಗಾಗಿ ನಡೆಯುವ ಜನಮತಗಣನೆ ಅಲ್ಲ.
ದೇಶದ ಮುಂದಿರುವ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನೀತಿ ಮಾತ್ರ ಅಲ್ಲ, ಖಾಸಗೀಕರಣ, ಮೀಸಲಾತಿ, ವಿದೇಶಿ ನೀತಿ, ಆಂತರಿಕ ಭದ್ರತೆ, ಕೇಂದ್ರ-ರಾಜ್ಯ ಸಂಬಂಧ, ನೆಲ-ಜಲ-ಭಾಷೆಯ ಬಗೆಗಿನ ವಿವಾದಗಳು, ಕಾಶ್ಮೆರದ ಬಿಕ್ಕಟ್ಟು, ಈಶಾನ್ಯ ರಾಜ್ಯಗಳಲ್ಲಿನ ಅಶಾಂತಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ.
ಕೇಜ್ರಿವಾಲ್ ಮತ್ತು ಸ್ನೇಹಿತರು ಇಲ್ಲಿಯ ವರೆಗೆ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಜನಲೋಕಪಾಲ ಮಸೂದೆಯ ಹೊರತಾಗಿ ಉಳಿದ ವಿಷಯಗಳ ಬಗ್ಗೆ ಮಾತನಾಡಿದ್ದೇ ಕಡಿಮೆ.ಅರವಿಂದ್ ಕೇಜ್ರಿವಾಲ್ ಮತ್ತು ಸಂಗಡಿಗರ ಮುಂದೆ ಇರುವ ಇನ್ನೊಂದು ಸವಾಲು `ನುಡಿದಂತೆ ನಡೆಯುವುದು'. ಇಂದಿನ ರಾಜಕಾರಣಕ್ಕೆ ಅಂಟಿರುವ ಮಹಾರೋಗ ಎಂದರೆ ಆತ್ಮವಂಚನೆ.
ಬಹಳಷ್ಟು ರಾಜಕಾರಣಿಗಳು ಬಹಿರಂಗವಾಗಿಯೇ ಇದನ್ನು ಒಪ್ಪಿಕೊಳ್ಳುತ್ತಾರೆ. ಶಾಸಕರು ಮತ್ತು ಸಂಸದರಾಗಿ ಅವರು ಕೈಗೊಳ್ಳುವ ಪ್ರಮಾಣವಚನ ಮತ್ತು ಚುನಾವಣಾ ಕಾಲದಲ್ಲಿ ಮತದಾರರಿಗೆ ನೀಡುವ ಆಶ್ವಾಸನೆಗಳಿಗೂ ಅದರ ನಂತರದ ಅವರ ನಡವಳಿಕೆಗಳಿಗೂ ಸಂಬಂಧವೇ ಇಲ್ಲ.
ಕೇಜ್ರಿವಾಲ್ ಮತ್ತು ಸಂಗಡಿಗರು ಕಳೆದ ಎರಡು ವರ್ಷಗಳ ಅವಧಿಯಲ್ಲಿ ರಾಜಕಾರಣದ ಸಾರ ಮಾತ್ರವಲ್ಲ ಅದರ ವಿನ್ಯಾಸದ ಬದಲಾವಣೆ ಬಗ್ಗೆ ಬಾಯಿತುಂಬಾ ಮಾತನಾಡಿದ್ದಾರೆ, ನೀತಿ ಪಾಠವನ್ನು ಅಗತ್ಯಕ್ಕಿಂತ ಹೆಚ್ಚೇ ಮಾಡಿದ್ದಾರೆ. ಆ ಮಟ್ಟದ ಆದರ್ಶ ರಾಜಕಾರಣವನ್ನು ಮಾಡುವುದು ಪ್ರಾಯೋಗಿಕವಾಗಿ ಅಷ್ಟೊಂದು ಸುಲಭವೇ?
`ಆಮ್ ಆದ್ಮಿ ಪಕ್ಷ'ದ ಪಕ್ಷದ ಪ್ರಣಾಳಿಕೆ ರಚನೆಯಿಂದ ಹಿಡಿದು, ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಪ್ರಚಾರ ಹೀಗೆ ಪ್ರತಿಯೊಂದು ಹೆಜ್ಜೆಯನ್ನೂ ರಾಜಕೀಯ ವಿರೋಧಿಗಳು ಮಾತ್ರವಲ್ಲ, ಮತದಾರರೂ ಗಮನಿಸುತ್ತಿದ್ದಾರೆ.
ಸಾಮಾಜಿಕ ಕಾರ್ಯಕರ್ತರಾಗಿದ್ದ ಅವರೆಲ್ಲ ಈಗ ರಾಜಕಾರಣಿಗಳು. ರಾಜಕೀಯ ಪಕ್ಷ ಕಟ್ಟುವ ನಿರ್ಧಾರವನ್ನು ಕೈಗೊಂಡ ಮರುಗಳಿಗೆಯಲ್ಲಿ ಒಬ್ಬ ಸಾಮಾಜಿಕ ಕಾರ್ಯಕರ್ತನಿಗೆ ಇದ್ದ ರಕ್ಷಣೆ ಮತ್ತು ಸಾರ್ವಜನಿಕ ಅನುಕಂಪವನ್ನು ಅವರು ಕಳೆದುಕೊಂಡು ಉಳಿದೆಲ್ಲ ರಾಜಕಾರಣಿಗಳ ಜತೆ ಬೀದಿಯಲ್ಲಿ ಬಂದು ನಿಂತಿದ್ದಾರೆ. ಯಾರೂ ಯಾವ ರಿಯಾಯಿತಿಯನ್ನೂ ಅವರಿಗೆ ಕೊಡುವುದಿಲ್ಲ.
ಈಗ ಅವರು ಸಹೋದ್ಯೋಗಿ ರಾಜಕಾರಣಿಗಳ ಜತೆಯಲ್ಲಿ ರಾಜಕಾರಣದಲ್ಲಿ ಸಾಮಾನ್ಯವಾಗಿರುವ ಆರೋಪ-ಪ್ರತ್ಯಾರೋಪಗಳ ಕೆಸರೆರಚಾಟದಲ್ಲಿ ತೊಡಗಬೇಕಾಗುತ್ತದೆ.
ನಮ್ಮೆಲ್ಲ ನೀತಿಗೆಟ್ಟ ರಾಜಕಾರಣ ಮತ್ತು ಭ್ರಷ್ಟಾಚಾರಕ್ಕೆ ಮೂಲವಾಗಿರುವ ದೋಷಪೂರ್ಣ ಚುನಾವಣಾ ವ್ಯವಸ್ಥೆಯಲ್ಲಿಯೇ ಕೇಜ್ರಿವಾಲ್ ಪಕ್ಷ ಪಾಲ್ಗೊಳ್ಳಲು ಹೊರಟಿದೆ. ಚುನಾವಣಾ ಸುಧಾರಣೆಗಳಾಗದೆ ನೀತಿ ಬದ್ಧ ರಾಜಕಾರಣ ಸಾಧ್ಯವೇ ಇಲ್ಲ ಎನ್ನುವಷ್ಟು ಭೀಕರವಾಗಿರುವ ವ್ಯವಸ್ಥೆಯಲ್ಲಿ ಬಹಳ ಬೇಗ ಕೇಜ್ರಿವಾಲ್ ತಂಡದ ಪ್ರಾಮಾಣಿಕತೆ ಮತ್ತು ನೈತಿಕನಿಷ್ಠೆ ಕರಗಿಹೋಗುವ ಅಪಾಯ ಇದೆ.
ಶುದ್ಧ 22 ಕ್ಯಾರೆಟ್‌ನಷ್ಟು ಪ್ರಾಮಾಣಿಕ ಮತ್ತು ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಿಬಿಟ್ಟರೆ ಕೇಜ್ರಿವಾಲ್ ಪಕ್ಷ ಅರ್ಧ ಗೆದ್ದಂತೆ. ಜಾತಿ, ದುಡ್ಡು ಮತ್ತು ತೋಳ್ಬಲದ ಪ್ರಭಾವಕ್ಕೀಡಾಗಿರುವ ಇಂದಿನ ರಾಜಕಾರಣದಲ್ಲಿ ಇದು ಸಾಧ್ಯವೇ? ಕಾನೂನು ಪ್ರಕಾರ ನೂರು ಕೊಲೆಗಳನ್ನು ಮಾಡಿದ ಪಾತಕಿಗೆ ಸಂಬಂಧಿಸಿದ ಮೇಲ್ಮನವಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದರೆ ಆತ ಚುನಾವಣೆಯಲ್ಲಿ ಸ್ಪರ್ಧಿಸಬಹುದು.
ಅದೇ ರೀತಿ ಬೇನಾಮಿಯಾಗಿ ರಾಶಿರಾಶಿ ಕಪ್ಪುಹಣವನ್ನು ಹೊಂದಿದ್ದರೂ ವರಮಾನ ಇಲಾಖೆಗೆ ಸಲ್ಲಿಸಿರುವ ಲೆಕ್ಕ ಕಾನೂನು ಪ್ರಕಾರ ಸರಿ ಎಂದಾದರೆ ಆತನೂ ಸ್ಪರ್ಧೆಗೆ ಅರ್ಹ. ರಾಜಕೀಯ ಪಕ್ಷಗಳ ಈ ನಡವಳಿಕೆಯಲ್ಲಿ ಕಾನೂನು ಪ್ರಕಾರ ತಪ್ಪು ಹುಡುಕಲಾಗದೆ ಇದ್ದರೂ ಇದನ್ನು ನೈತಿಕವಾಗಿ ಸರಿ ಎಂದು ಹೇಳಲಾಗದು. ಕೇಜ್ರಿವಾಲ್ ಪಕ್ಷ ಕೂಡಾ ಈ ವ್ಯತ್ಯಾಸವನ್ನು ಹೀಗೆಯೇ ಗುರುತಿಸುತ್ತದೆಯೇ?
ಗೆಲ್ಲುವ ಅರ್ಹತೆಯೊಂದಿದ್ದರೆ ಕಾನೂನು ಪ್ರಕಾರ ಅಪರಾಧ ಅಲ್ಲದ ಆರೋಪಗಳು ಕ್ಷಮ್ಯ ಎಂದು ಹೇಳುತ್ತದೆಯೇ? ಚುನಾವಣಾ ಆಯೋಗ ಹೇರಿರುವ ಪ್ರಚಾರ ವೆಚ್ಚದ ಮಿತಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಿಕೊಂಡು ಹೋಗುತ್ತದೆಯೇ?
ಇಂತಹ ಅನೇಕ ಸವಾಲುಗಳು `ಆಮ್ ಆದ್ಮಿ ಪಾರ್ಟಿ' ಮುಂದೆ ಇವೆ. `ಕೇಜ್ರಿವಾಲ್ ಮೊದಲೇ ರಾಜಕೀಯದ ಗುಪ್ತ ಕಾರ್ಯಸೂಚಿ ಹೊಂದಿದ್ದರು. ಇದಕ್ಕಾಗಿಯೇ ಅವರು ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಪಾಲ್ಗೊಂಡಿದ್ದರು, ಅಣ್ಣಾಹಜಾರೆಯವರನ್ನು ಬಳಸಿಕೊಂಡರು..'ಇತ್ಯಾದಿ ಆರೋಪಗಳು ಕೂಡಾ ಇವೆ.
ತಂಡದ ಸದಸ್ಯರ ಮೈಗೆ ಅಂಟಿಕೊಂಡಿರುವ ಸಣ್ಣಪುಟ್ಟ ಕಳಂಕಗಳೂ ಇವೆ. ಇವುಗಳೆಲ್ಲದರ ಹೊರತಾಗಿಯೂ ದೇಶದ ಮತದಾರರು `ಆಮ್ ಆದ್ಮಿ ಪಾರ್ಟಿ'ಯನ್ನು ಗೆಲ್ಲಿಸಿದರೆ ಅದರಿಂದ ಖಂಡಿತ ದೇಶದಲ್ಲಿ ಹೊಸ ರಾಜಕೀಯದ ಶಕೆ ಪ್ರಾರಂಭವಾಗಲಿದೆ.
ಸಾಮಾನ್ಯವಾಗಿ ಮತದಾರರು ಅದರಲ್ಲಿಯೂ ನಗರವಾಸಿ ಮತ್ತು ಶಿಕ್ಷಿತರು ಚುನಾವಣಾ ಸಮಯದಲ್ಲಿ `ಒಳ್ಳೆಯ ಅಭ್ಯರ್ಥಿಗಳು ಎಲ್ಲಿದ್ದಾರೆ? ಕೆಟ್ಟವರು ಮತ್ತು ಅತಿಕೆಟ್ಟವರ ನಡುವೆಯೇ ಆಯ್ಕೆ ಮಾಡಬೇಕಾಗಿದೆಯಲ್ಲವೇ' ಎಂದು ವ್ಯವಸ್ಥೆಯನ್ನು ಹಳಿಯುತ್ತಾ ಅರ್ಹ ಅಭ್ಯರ್ಥಿಗಳೇನಾದರೂ ಕಣದಲ್ಲಿದ್ದರೆ ಅವರಿಗೆ ಮತಹಾಕಿಬಿಟ್ಟು ಗೆಲ್ಲಿಸಬಹುದಿತ್ತು ಎಂಬ ಆದರ್ಶದ ಮಾತುಗಳಿಂದ ಕಾಲಹರಣ ಮಾಡುತ್ತಾ ಬಂದಿದ್ದಾರೆ.
ಇಲ್ಲಿಯ ವರೆಗೆ ಇವರಾಡುವ ಮಾತುಗಳಲ್ಲಿನ ಪ್ರಾಮಾಣಿಕತೆಯನ್ನು ಪರೀಕ್ಷೆಗೊಡ್ಡುವ ಬಿಡಿಬಿಡಿ ಅವಕಾಶಗಳು ಅಲ್ಲಿ ಇಲ್ಲಿ ಕಾಣಿಸಿಕೊಂಡಿದ್ದರೂ ರಾಷ್ಟ್ರವ್ಯಾಪಿ ಪರ್ಯಾಯ ರಾಜಕೀಯದ ಅವಕಾಶ ಎಪ್ಪತರ ದಶಕದ ನಂತರ ಎದುರಾಗಿರಲಿಲ್ಲ. ಅಂತಹ ಮಾದರಿ ರಾಜಕೀಯ ಪಕ್ಷವನ್ನು ಕೇಜ್ರಿವಾಲ್ ತಂಡ ಮತದಾರರ ಮುಂದೆ ಕಟ್ಟಿ ನಿಲ್ಲಿಸಿದೆ.
ಈಗ ಈ ಪಕ್ಷವನ್ನು ಗೆಲ್ಲಿಸುವ ಹೊಣೆ ಅವರನ್ನು ಬೆಂಬಲಿಸುತ್ತಿದ್ದ, ಅವರ ಸಭೆಗಳಿಗೆ `ಸ್ವಯಂಪ್ರೇರಿತರಾಗಿ' ಲಕ್ಷಲಕ್ಷ ಸಂಖ್ಯೆಯಲ್ಲಿ ಸೇರುತ್ತಿದ್ದ `ಜಾಗೃತ, ಪ್ರಾಮಾಣಿಕ, ದೇಶಭಕ್ತ' ಜನತೆಯದ್ದು. ಇವರು `ಆಮ್ ಆದ್ಮಿ ಪಾರ್ಟಿ'ಯನ್ನು ಗೆಲ್ಲಿಸುತ್ತಾರಾ?

Monday, November 19, 2012

ಪತ್ರಕರ್ತ ಸಾಕ್ಷಿಯಾಗಬೇಕೆ, ರಕ್ಷಕನಾಗಬೇಕೆ? Nov 19 2012


ಆತ್ಮಹತ್ಯೆ ಮಾಡಿಕೊಳ್ಳುವಂತಹ ಅಪರಾಧವನ್ನು ಅವನೇನು ಮಾಡಿರಲಿಲ್ಲ. ವೃತ್ತಿಯಲ್ಲಿ ಆತ ಒಬ್ಬ ಪತ್ರಿಕಾ ಛಾಯಾಗ್ರಾಹಕನಾಗಿದ್ದ. ಜಗತ್ತಿನ ಅತಿದೊಡ್ಡ ಪತ್ರಿಕೆಗಳು ಆತನ ಪೋಟೋಗಳನ್ನು ಪ್ರಕಟಿಸಲು ತುದಿಗಾಲಲ್ಲಿ ನಿಂತಿದ್ದವು. ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ ಒಲಿದು ಬಂದಿತ್ತು.

ಎಲ್ಲಕ್ಕಿಂತಲೂ ಮುಖ್ಯವಾಗಿ ಆತನ ವಯಸ್ಸು ಕೇವಲ ಮೂವತ್ತಮೂರು ಆಗಿತ್ತು. ಆ ವಯಸ್ಸಿಗೆ ಸಿಕ್ಕ ಯಶಸ್ಸು, ಮನ್ನಣೆಯನ್ನು ಗಮನಿಸಿದರೆ ವೃತ್ತಿಯಲ್ಲಿ ಆತನ ಭವಿಷ್ಯ ಉಜ್ವಲವಾಗಿತ್ತು ಎನ್ನುವುದಕ್ಕೆ ಅನುಮಾನವೇ ಇರಲಿಲ್ಲ. ಹೀಗಿದ್ದರೂ ಬದುಕುವ ಆಸೆಯನ್ನೇ ಕಳೆದುಕೊಂಡ ಆತ ಆತ್ಮಹತ್ಯೆ ಮಾಡಿಕೊಂಡ. ಆತನ ಹೆಸರು ಕೆವಿನ್ ಕಾರ್ಟರ್.
ಇಷ್ಟು ಹೇಳಿದರೆ ಬಹಳಷ್ಟು ಮಂದಿಗೆ ಗುರುತು ಹತ್ತಲಾರದು. ಆತ ಜಗತ್ತಿಗೆ ಪರಿಚಯವಾಗಿದ್ದೇ ಒಂದು ಫೋಟೊದ ಮೂಲಕ. ದಕ್ಷಿಣ ಆಫ್ರಿಕಾದವನಾಗಿದ್ದ ಕಾರ್ಟರ್ ಬರಗಾಲ ಮತ್ತು ಬಂಡುಕೋರರ ಹಿಂಸಾಚಾರದಿಂದ ನಲುಗಿಹೋಗಿದ್ದ ಸೂಡಾನ್‌ಗೆ ಹೋಗಿದ್ದಾಗ ಅಲ್ಲೊಂದು ಹೃದಯವಿದ್ರಾವಕ ದೃಶ್ಯವನ್ನು ಕಾಣುತ್ತಾನೆ. ತಕ್ಷಣ ಆತನೊಳಗಿದ್ದ ಕಸಬುದಾರ ಛಾಯಾಗ್ರಾಹಕ ಜಾಗೃತನಾಗುತ್ತಾನೆ.
ಹಸಿವಿನಿಂದಾಗಿ ಮೂಳೆಚಕ್ಕಳವಾಗಿ ಹೋಗಿದ್ದ ಮಗುವೊಂದು ಸಂತ್ರಸ್ತರ ಶಿಬಿರದಲ್ಲಿರುವ ಗಂಜಿ ಕೇಂದ್ರದ ಕಡೆ ತೆವಳುತ್ತಾ ಹೋಗುತ್ತಿರುವುದು ಮತ್ತು ಅದರ ಹಿಂದೆಯೇ ಒಂದು ರಣಹದ್ದು ಆ ಮಗುವಿನ ಮೇಲೆ ಎರಗಿಬೀಳಲು ಕಾಯುತ್ತಿರುವ ದೃಶ್ಯ ಅದು.
ಸದ್ದು ಮಾಡಿದರೆ ಹದ್ದು ಹಾರಿಹೋಗುತ್ತೇನೋ ಎಂಬ ಭಯದಿಂದ ಕಾರ್ಟರ್ ಕೂಡಾ ತೆವಳುತ್ತಾ ಸಾಧ್ಯ ಇರುವಷ್ಟು  ಹತ್ತಿರ ಹೋಗಿ ಫೋಟೊ ತೆಗೆಯುತ್ತಾನೆ. ಅದಕ್ಕಿಂತ ಮೊದಲು ಹದ್ದು ರೆಕ್ಕೆ ಬಿಚ್ಚಬಹುದೇನೋ ಎಂಬ ನಿರೀಕ್ಷೆಯಿಂದ ಆತ 20 ನಿಮಿಷ ಕಾದಿದ್ದನಂತೆ.
ಆ ಫೋಟೊ ಮೊದಲು `ದಿ ನೂಯಾರ್ಕ್ ಟೈಮ್ಸ~ ಮತ್ತು `ದಿ ಮೇಲ್ ಆ್ಯಂಡ್ ಗಾರ್ಡಿಯನ್~ ಪತ್ರಿಕೆಗಳಲ್ಲಿ ಪ್ರಕಟವಾಗುತ್ತದೆ. ಅದರ ನಂತರ  ಹಲವಾರು ಪತ್ರಿಕೆಗಳು ಅದನ್ನು ಮರುಮುದ್ರಿಸಿದ್ದವು. ಜಗತ್ತಿನಾದ್ಯಂತ ಓದುಗರು ಅದಕ್ಕೆ ಪ್ರತಿಕ್ರಿಯಿಸಿದ್ದರು.  ಬರಗಾಲ ಮತ್ತು ಬಂಡುಕೋರರ ವಿರುದ್ಧ ಹೋರಾಟ ನಡೆಸುತ್ತಿದ್ದ ಸೂಡಾನ್ ಸರ್ಕಾರಕ್ಕೆ ವಿಶ್ವದ ಎಲ್ಲ ಕಡೆಗಳಿಂದಲೂ ನೆರವು ಹರಿದುಬಂದಿತ್ತು.

ಆದರೆ ಬಹಳಷ್ಟು ಓದುಗರು ನೋವು, ದುಃಖ, ಆಕ್ರೋಶಗಳಿಂದ ಪ್ರತಿಕ್ರಿಯಿಸಿದ್ದರು. ಕೆಲವರು ಛಾಯಾಗ್ರಾಹಕನ ಅಸಂವೇದನಾಶೀಲತೆಯನ್ನು ಟೀಕಿಸಿದ್ದರು. `..ಒಬ್ಬ ಛಾಯಾಗ್ರಾಹಕ ಕೇವಲ ಒಂದು ಫೋಟೊ ಸಂಪಾದನೆಯನ್ನಷ್ಟೇ ನೋಡದೆ, ಮೊದಲು ಹದ್ದನ್ನು ಅಲ್ಲಿಂದ ಓಡಿಸಿ ಮಗುವನ್ನು ರಕ್ಷಿಸಬೇಕಿತ್ತು. ವೃತ್ತಿ ಏನೇ ಇರಲಿ ಆತ ಮೊದಲು ಮನುಷ್ಯನಾಗಬೇಕು..~ ಎಂದೆಲ್ಲ ಜನ ಪ್ರತಿಕ್ರಿಯಿಸಿದ್ದರು.
ಕೆಲವು ಪತ್ರಿಕೆಗಳು ಕಾರ್ಟರ್ ಕೂಡಾ ಒಬ್ಬ ರಣಹದ್ದು ಎಂದು ಬಣ್ಣಿಸಿ `ಎರಡು ಹದ್ದುಗಳ ನಡುವೆ ಮಗು ಇತ್ತು~ ಎಂದು ಬರೆದಿದ್ದವು. ಕೊನೆಗೆ `ನೂಯಾರ್ಕ್ ಟೈಮ್ಸ~ನ ಸಂಪಾದಕರು ವಿವರಣೆ ಕೊಡಬೇಕಾಯಿತು.
ಸತ್ಯಸಂಗತಿ ಏನೆಂದರೆ ಫೋಟೊ ತೆಗೆದ ಕೂಡಲೇ ಕಾರ್ಟರ್ ಹದ್ದನ್ನು ಅಲ್ಲಿಂದ ಓಡಿಸಿ ಆ ಹೆಣ್ಣುಮಗುವನ್ನು ತಕ್ಷಣದ ಅಪಾಯದಿಂದ ಪಾರು ಮಾಡಿದ್ದ. ಅದರ ನಂತರ ಮಗುವಿನ ಗತಿಯೇನಾಯಿತು ಎನ್ನುವುದು ಆತನಿಗೂ ತಿಳಿದಿರಲಿಲ್ಲ. ಬರಗಾಲಪೀಡಿತ ಸೂಡಾನ್‌ನಲ್ಲಿ ಮುಕ್ತಪತ್ರಿಕಾ ಸ್ವಾತಂತ್ರ್ಯ ಇರಲಿಲ್ಲ.
ಅಲ್ಲಿದ್ದ ಬರಪೀಡಿತ ಮನುಷ್ಯರ ಫೋಟೊ ತೆಗೆಯುವುದು ಅಲ್ಲಿನ ಪ್ರಭುತ್ವಕ್ಕೆ ಇಷ್ಟದ ಕೆಲಸವೂ ಆಗಿರಲಿಲ್ಲ. ಬರಪೀಡಿತ ವ್ಯಕ್ತಿಗಳು ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಸಾಧ್ಯತೆ ಇರುವುದರಿಂದ ಅವರನ್ನು ಮುಟ್ಟುವುದಕ್ಕೆ ನಿರ್ಬಂಧ ಕೂಡಾ ಇತ್ತು. ಒಂದು ಫೋಟೊವನ್ನಷ್ಟೇ ನೋಡಿ ಕಾರ್ಟರ್ ಮನುಷ್ಯನೇ ಅಲ್ಲ ಎಂದು ತೀರ್ಮಾನಿಸಿದ ಅಮಾಯಕ ಜನರಿಗೆ ಈ ಎಲ್ಲ ವಿವರಗಳು ಗೊತ್ತಿರುವ ಸಾಧ್ಯತೆಗಳು ಕಡಿಮೆ. ಇದು ಎಲ್ಲ  ಕಾಲದ ಸತ್ಯ.
`ಆ ಬಾಲಕಿಯ ಫೋಟೊ ತೆಗೆದ ನಂತರ ಕಾರ್ಟರ್ ಮನಸ್ಸು ಕಲಕಿಹೋಗಿತ್ತು. ಆತ ಸಮೀಪದ ಮರವೊಂದರ ನೆರಳಲ್ಲಿ ಕೂತು ಸಿಗರೇಟ್ ಸೇದುತ್ತಾ ದೇವರ ಹತ್ತಿರ ಮಾತನಾಡಿದ್ದ. ಅವನು ಎಷ್ಟೊಂದು ದುಃಖಿತನಾಗಿದ್ದನೆಂದರೆ `ನನಗೆ ನನ್ನ ಮಗಳನ್ನು ಆಲಿಂಗಿಸಬೇಕೆನಿಸುತ್ತದೆ~ ಎಂದು ಬಡಬಡಿಸುತ್ತಿದ್ದ~ ಎಂದು ಆ ಸಮಯದಲ್ಲಿ ಕಾರ್ಟರ್ ಜತೆಯಲ್ಲಿದ್ದ ಸ್ನೇಹಿತ ಸಿಲ್ವಾ ನಂತರದ ದಿನಗಳಲ್ಲಿ ಬರೆದಿದ್ದ.
ಈ ವಿವಾದಗಳ ನಂತರವೂ ಆ ಚಿತ್ರಕ್ಕಾಗಿ ಕೆವಿನ್ ಕಾರ್ಟರ್  ಪ್ರತಿಷ್ಠಿತ `ಪುಲಿಟ್ಜರ್~ ಪ್ರಶಸ್ತಿ ಪಡೆಯುತ್ತಾನೆ. ರಾಯಿಟರ್ ಸುದ್ದಿ ಸಂಸ್ಥೆಯಲ್ಲಿ ಆಕರ್ಷಕ ಸಂಬಳದ ಉದ್ಯೋಗ ಪಡೆಯುತ್ತಾನೆ. ಆದರೆ ಆತ ಎಂದೂ ಸಂತೋಷವಾಗಿರಲಿಲ್ಲ.
ಕೆವಿನ್ ಕಾರ್ಟರ್‌ನ ಬದುಕನ್ನು ಸಾವು ಕೊನೆಗೊಳಿಸಿದರೂ, ಆ ಸಾವಿನಿಂದ ಹುಟ್ಟಿಕೊಂಡ ಅನೇಕ ಪ್ರಶ್ನೆಗಳು ಇಂದು ಕೂಡಾ ಮಾಧ್ಯಮಕ್ಷೇತ್ರದ ಮುಂದೆ ಇವೆ. `ಒಬ್ಬ ಪತ್ರಕರ್ತ ಸಾಕ್ಷಿಯಾಗಬೇಕೇ, ಇಲ್ಲವೇ ರಕ್ಷಕನಾಗಬೇಕೇ?~ ಎನ್ನುವುದು ಮೊದಲ ಪ್ರಶ್ನೆ. 
ಮಂಗಳೂರಿನ `ಸ್ಟೇಹೋಂ~ ಮೇಲೆ ದಾಳಿ ನಡೆಸಿ ಅಲ್ಲಿದ್ದ ಯುವಕ - ಯುವತಿಯರ ಜತೆ ಅಸಭ್ಯವಾಗಿ ವರ್ತಿಸಿದ್ದ ದುಷ್ಕರ್ಮಿಗಳ ಕೃತ್ಯವನ್ನು ವರದಿ ಮಾಡಿದ್ದ ಸುದ್ದಿವಾಹಿನಿಯ ವರದಿಗಾರ ನವೀನ್ ಸೂರಿಂಜೆಯ ಬಂಧನ ಕೆವಿನ್ ಕಾರ್ಟರ್ ಬಿಟ್ಟುಹೋಗಿರುವ ಪ್ರಶ್ನೆಗಳನ್ನು ಮತ್ತೆ ಕೇಳುವಂತೆ ಮಾಡಿದೆ.
ಅಂತರರಾಷ್ಟ್ರೀಯ ಖ್ಯಾತಿಯ ಪತ್ರಿಕಾಛಾಯಾಗ್ರಾಹಕ ರಘು ರಾಯ್ ಇತ್ತೀಚಿನ ಇಂತಹ ವಿವಾದಗಳ ಬಗ್ಗೆ ಪ್ರತಿಕ್ರಿಯಿಸುತ್ತಾ `ಶೂಟ್ ಮಾಡಿ ಚಿತ್ರ ಪಡೆಯುವುದು ಅದರ ಮೂಲಕ ಘಟನೆಗೆ ಸಾಕ್ಷ್ಯ ಒದಗಿಸುವುದು ಅಷ್ಟೇ ಒಬ್ಬ ಕ್ಯಾಮೆರಾಮೆನ್ ಕೆಲಸ~ ಎಂದಿದ್ದರು. ಎಲ್ಲರೂ ಈ ಅಭಿಪ್ರಾಯವನ್ನು ಒಪ್ಪುವುದಿಲ್ಲ.
ಇದಕ್ಕೆ ರೋಚಕತೆಯ ಬೆನ್ನುಹತ್ತಿ ದಾರಿ ತಪ್ಪುತ್ತಿರುವ ಕೆಲವು ಸುದ್ದಿವಾಹಿನಿಗಳು ಮುಖ್ಯ ಕಾರಣ. `ಪತ್ರಿಕಾ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಇಂತಹ ಮಾಧ್ಯಮಗಳಿಗೆ ಮೂಗುದಾರ ಹಾಕಬೇಕು~ ಎಂದು ಜನ ಬಹಿರಂಗವಾಗಿಯೇ ಮಾತನಾಡತೊಡಗಿದ್ದಾರೆ. ವೃತ್ತಿನಿಷ್ಠ ಮಾಧ್ಯಮಗಳನ್ನು ಎಂದೂ ಬಯಸದ ಪ್ರಭುತ್ವ, ಹಾದಿ ತಪ್ಪಿರುವ ಕೆಲವು ಸುದ್ದಿವಾಹಿನಿಗಳನ್ನು ಉಲ್ಲೇಖಿಸಿ ಒಟ್ಟು ಪತ್ರಿಕಾ ಸ್ವಾತಂತ್ರ್ಯವನ್ನೇ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ.
ಅದು  ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದಿಂದ ಕರ್ನಾಟಕದ ಬಿಜೆಪಿ ಸರ್ಕಾರದವರೆಗೆ ಎಲ್ಲೆಡೆ ವ್ಯವಸ್ಥಿತವಾಗಿ ಪ್ರಾರಂಭವಾಗಿದೆ. ಆದುದರಿಂದ `ಪತ್ರಿಕಾ ಸ್ವಾತಂತ್ರ್ಯದ ದುರುಪಯೋಗ~ ಮತ್ತು `ಪತ್ರಿಕಾ ಸ್ವಾತಂತ್ರ್ಯದ ಹರಣ~ವನ್ನು ಪ್ರತ್ಯೇಕವಾಗಿ ಇಟ್ಟುಕೊಂಡು ಚರ್ಚೆ ನಡೆಸಬೇಕಾಗಿದೆ. ಇವೆರಡನ್ನೂ ಸಾಮಾನ್ಯೀಕರಿಸುವುದರಿಂದ ಅಪಾಯ ಪತ್ರಕರ್ತರಿಗೆ ಮಾತ್ರ ಅಲ್ಲ, ಪ್ರಜಾಪ್ರಭುತ್ವಕ್ಕೂ ಇದೆ.
ಪತ್ರಕರ್ತರು, ಪತ್ರಿಕಾಛಾಯಾಗ್ರಾಹಕರು ಮತ್ತು ಕ್ಯಾಮೆರಾಮೆನ್‌ಗಳು `ಸಾಕ್ಷಿಗಳಾಗಬೇಕೆ, ರಕ್ಷಕರಾಗಬೇಕೆ?~ ಎನ್ನುವುದು ಇತ್ತೀಚಿನವರೆಗೆ ಕೇವಲ ನೈತಿಕ ಪ್ರಶ್ನೆಯಾಗಿತ್ತು. ಆದುದರಿಂದ ರಕ್ಷಕರಾಗದೆ ಸಾಕ್ಷಿಗಳಾಗಲಷ್ಟೇ ಹೊರಟವರನ್ನು ಪೊಲೀಸರು ಬಂಧಿಸುತ್ತಿರಲಿಲ್ಲ.
ಈಗಲೂ ಇದನ್ನು ನೈತಿಕ ಪ್ರಶ್ನೆಯಾಗಿಯೇ ಇಟ್ಟುಕೊಂಡು ಚರ್ಚೆ ನಡೆಯಲಿ, ನಡೆಯಲೇಬೇಕು. ಆದರೆ ಪೊಲೀಸರು ಈಗ ಇದನ್ನು ಕಾನೂನಿನ ಪ್ರಶ್ನೆಯನ್ನಾಗಿ ಮಾಡಿಕೊಳ್ಳಲು ಹೊರಟಿದ್ದಾರೆ. `ಪತ್ರಕರ್ತರಿಗೆ `ಸಾಕ್ಷಿದಾರನ ಕರ್ತವ್ಯ~ವಷ್ಟೇ ಮುಖ್ಯ ಅಲ್ಲ, ಆತನಿಗೆ `ರಕ್ಷಕನ ಜವಾಬ್ದಾರಿ~ಯೂ ಇರಬೇಕು, ಪತ್ರಕರ್ತನೊಬ್ಬ ರಕ್ಷಕನಾಗದೆ ಕೇವಲ ಸಾಕ್ಷಿಯಾದರೆ ಆತ ಅಪರಾಧಿ~ ಎಂದು ಪೊಲೀಸರು ಹೇಳುತ್ತಿದ್ದಾರೆ. 
ತನ್ನ ವರದಿ ಇಲ್ಲವೇ ಚಿತ್ರವನ್ನು ಸಾಕ್ಷಿಯಾಗಿ ಒದಗಿಸುವ ಮೂಲಕವೇ ಪತ್ರಕರ್ತ ರಕ್ಷಕನಾಗುತ್ತಾನೆ ಎಂಬುದನ್ನು ಪೊಲೀಸರು ಮರೆತಿದ್ದಾರೆ. ನವೀನ್ ಮತ್ತು ಗೆಳೆಯರು `ಹೋಂಸ್ಟೇ~ ದಾಳಿಯನ್ನು ಮಾಧ್ಯಮಗಳ ಮೂಲಕ ಬಯಲುಗೊಳಿಸದೆ ಇದ್ದಿದ್ದರೆ ಅಲ್ಲಿನ ಕೋಮುವಾದಿಗಳ ಅಟ್ಟಹಾಸ ಮತ್ತು ಪೊಲೀಸರ ನಿಷ್ಕ್ರಿಯತೆ ಖಂಡಿತ ಬಯಲಾಗುತ್ತಿರಲಿಲ್ಲ. ಈ ದುಷ್ಕೃತ್ಯವನ್ನು ಸಾಕ್ಷಿಸಮೇತ ಬಯಲುಗೊಳಿಸುವ ಮೂಲಕ ನವೀನ್ ಮತ್ತು ಗೆಳೆಯರು ಮುಂದೆ ಇನ್ನಷ್ಟು ಯುವಕ-ಯುವತಿಯರು ಈ ರೀತಿಯ ದಾಳಿಗೊಳಗಾಗದಂತೆ ರಕ್ಷಿಸಿದ್ದಾರೆ.
`ಒಬ್ಬ ವೃತ್ತಿನಿಷ್ಠ, ಸಂವೇದನಾಶೀಲ ಮತ್ತು ಪ್ರಾಮಾಣಿಕನಾದ ಪತ್ರಕರ್ತ ಇಲ್ಲವೇ ಪತ್ರಿಕಾಛಾಯಾಗ್ರಾಹಕ ಯಾವ ದೇಶ ಇಲ್ಲವೇ ಕಾಲದಲ್ಲಿ  ಸಂತೋಷ-ನೆಮ್ಮದಿಯಿಂದ ಬದುಕಲು ಸಾಧ್ಯವೇ?~ ಎನ್ನುವ ಎರಡನೆ ಪ್ರಶ್ನೆಯನ್ನು ಕೂಡಾ ಕೆವಿನ್ ಕಾರ್ಟರ್ ಬಿಟ್ಟುಹೋಗಿದ್ದಾನೆ. ಆತನ ಆತ್ಮಹತ್ಯೆಗೆ ಸೂಡಾನ್ ಬಾಲಕಿಯ ಫೋಟೊವೊಂದೇ ಕಾರಣ ಅಲ್ಲ.

ವರ್ಣದ್ವೇಷ ಅದರ ಉತ್ತುಂಗದಲ್ಲಿರುವ ದಿನಗಳಲ್ಲಿ ದಕ್ಷಿಣ ಆಫ್ರಿಕಾದ ಮಧ್ಯಮ ವರ್ಗದ ಬಿಳಿಯರ ಕುಟುಂಬದಲ್ಲಿ ಹುಟ್ಟಿದ್ದ ಕಾರ್ಟರ್ ಬಾಲ್ಯದಿಂದಲೇ ಕಪ್ಪುಜನಾಂಗದವರ ಮೇಲೆ ಬಿಳಿಯರು ನಡೆಸುತ್ತಿದ್ದ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದವ. ಅವಕಾಶ ಸಿಕ್ಕಿದಾಗಲೆಲ್ಲ ಅದರ ವಿರುದ್ಧ ಪ್ರತಿಭಟನೆ ನಡೆಸಿದವ. `ದಿ ಬ್ಯಾಂಗ್ ಬ್ಯಾಂಗ್ ಕ್ಲಬ್~ ಎಂದು ಕರೆಯಲಾಗುತ್ತಿದ್ದ ನಾಲ್ಕು ಬಿಳಿಯ ಪತ್ರಿಕಾಛಾಯಾಗ್ರಾಹಕರ ಸಂಘಟನೆಯಲ್ಲಿ ಕಾರ್ಟರ್ ಒಬ್ಬನಾಗಿದ್ದ.
ದಕ್ಷಿಣ ಆಫ್ರಿಕಾದಲ್ಲಿ ಬಿಳಿಯ ದುಷ್ಕರ್ಮಿಗಳು ಕಪ್ಪುಜನಾಂಗಕ್ಕೆ ಸೇರಿದ ವ್ಯಕ್ತಿಗಳ ಕುತ್ತಿಗೆಗೆ ಟಯರ್‌ಗಳನ್ನು ತೂಗುಹಾಕಿ ಬೆಂಕಿಹಚ್ಚಿ ಸಾಯಿಸುವುದು ಸಾಮಾನ್ಯವಾಗಿತ್ತು. ಇದಕ್ಕೆ `ನೆಕ್ಲೆಸಿಂಗ್~ ಎಂದು ಕರೆಯುತ್ತಿದ್ದರು. ಇಂತಹ ಮೊದಲ ಘಟನೆಯ ಚಿತ್ರ ತೆಗೆದು ಪತ್ರಿಕೆಯಲ್ಲಿ ಪ್ರಕಟಣೆಗೆ ಕೊಟ್ಟವ ಕಾರ್ಟರ್. ಈ ರೀತಿಯ ಹಲವಾರು ಅಮಾನುಷ ಘಟನೆಗಳ ಚಿತ್ರಗಳನ್ನು ಕಾರ್ಟರ್ ತೆಗೆದಿದ್ದ. ವೃತ್ತಿಜೀವನದಲ್ಲಿ ಎದುರಿಸಿದ ಇಂತಹ ಘಟನೆಗಳಿಂದ ಆತ ನೊಂದುಹೋಗಿದ್ದ.
 ಅಷ್ಟೊತ್ತಿಗೆ ಆತನ ಜೀವದ ಗೆಳೆಯ ಮತ್ತು `ದಿ ಬ್ಯಾಂಗ್‌ಬ್ಯಾಂಗ್ ಕ್ಲಬ್~ನ ಸದಸ್ಯ ಕೆನ್ ಊಸ್ಟರ್‌ಬ್ರೋಕ್ ಫೋಟೊ ತೆಗೆಯುತ್ತಿದ್ದಾಗಲೇ ಪೊಲೀಸರ ಗುಂಡಿಗೆ ಬಲಿಯಾಗುತ್ತಾನೆ. ಸಾವಿನ ಸಮಯದಲ್ಲಿ ಗೆಳೆಯನ ಸಮೀಪವೇ ಕಾರ್ಟರ್ ಇದ್ದ. ಆತನ ಮನೋಕ್ಲೇಶಕ್ಕೆ ಈ ಘಟನೆ ಕೂಡಾ ಕಾರಣ. ನಂತರದ ದಿನಗಳಲ್ಲಿ ಕುಡಿತದ ದಾಸನಾಗಿ ಹೋಗಿದ್ದ, ಮಾದಕ ವ್ಯಸನಿಯೂ ಆಗಿದ್ದ.
ಕೊನೆಕೊನೆಗೆ ತಾನು ತೆಗೆದ ಚಿತ್ರಗಳೆಲ್ಲವೂ ಎದ್ದುಬಂದು ಆತನನ್ನು ಕಾಡತೊಡಗಿ ಬದುಕಿನ ನೆಮ್ಮದಿಯನ್ನೇ ಕಸಿದುಕೊಂಡುಬಿಟ್ಟಿದ್ದವು.  ಸಾಯುವ ಮೊದಲು ಬರೆದಿಟ್ಟಿದ ಪತ್ರ ಕೂಡಾ ಇದನ್ನೇ ಹೇಳುತ್ತಿದೆ:  `....ಹತ್ಯೆಗಳು... ಹೆಣಗಳು.. ಕೋಪ, ನೋವು... ಹಸಿವು ಮತ್ತು ಗಾಯದಿಂದ ನರಳುತ್ತಿರುವ ಮಕ್ಕಳು... ಹಿಂಸಾವಿನೋದಿ ಹುಚ್ಚು ಪೊಲೀಸರು... -ಈ ಎಲ್ಲ ನೆನಪುಗಳು ನನ್ನನ್ನು ಕಾಡುತ್ತಿವೆ. ನಾನು ನನ್ನ ಗೆಳೆಯ ಕೆನ್‌ನನ್ನು ಭೇಟಿಯಾಗಲು ಹೋಗುತ್ತಿದ್ದೇನೆ, ಆದೃಷ್ಟಶಾಲಿಯಾಗಿದ್ದರೆ ಆತನ ಭೇಟಿಯಾಗಬಹುದು....~ ಎಂದು ಕಾರ್ಟರ್ ಆ ಪತ್ರದಲ್ಲಿ ಬರೆದಿದ್ದ. 
 ಪತ್ರಕರ್ತರು ಸಂವೇದನಾಶೀಲರಾಗಿರಕೆಂದು ಸಮಾಜ ಬಯಸುತ್ತದೆ, ಸರ್ಕಾರವೂ ಅದನ್ನೇ ಹೇಳುತ್ತಿದೆ. ಆದರೆ ರಾಕ್ಷಸ ರೂಪ ಪಡೆಯುತ್ತಿರುವ ಸರ್ಕಾರ ಮತ್ತು ಸಂವೇದನೆಯನ್ನೇ ಕಳೆದುಕೊಳ್ಳುತ್ತಿರುವ ಸಮಾಜದ ಮಧ್ಯೆ ಪತ್ರಕರ್ತ ಸಂವೇದನಾಶೀಲನಾಗಿ ಉಳಿಯಲು ಹೇಗೆ ಸಾಧ್ಯ? ಬಹಳಷ್ಟು ಸಂದರ್ಭಗಳಲ್ಲಿ ವೃತ್ತಿನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕೆಂದು ಹೊರಟ ಪತ್ರಕರ್ತ ಹತಾಶನಾಗುತ್ತಾನೆ, ಸಿನಿಕನಾಗುತ್ತಾನೆ, ದುರ್ಬಲ ಮನಸ್ಸಿನವನಾಗಿದ್ದರೆ ಕೊನೆಗೆ ಕೆವಿನ್ ಕಾರ್ಟರ್‌ನಂತೆ ಆತ್ಮಹತ್ಯೆ ಮಾಡಿಕೊಳ್ಳಬಹುದು.
ಮತ್ತೆ ಮೊದಲಿನ ಪ್ರಶ್ನೆಗೆ ಬರುವುದಾದರೆ ಕೆವಿನ್ ಕಾರ್ಟರ್ ಆತ್ಮಹತ್ಯೆ ಮಾಡಿಕೊಳ್ಳುವಂತಹ ಯಾವ ಅಪರಾಧ ಮಾಡಿದ್ದ? ಇದನ್ನೇ ಇನ್ನು ಸ್ವಲ್ಪ ಬದಲಾಯಿಸಿ ಕೇಳುವುದಾದರೆ ನವೀನ್ ಸೂರಿಂಜೆ ಎಂಬ ಪತ್ರಕರ್ತ ಬಂಧನಕ್ಕೊಳಗಾಗುವಂತಹ ಯಾವ ಅಪರಾಧ ಮಾಡಿದ್ದ? ಅಪರಾಧ ಮಾಡದೆ ಇದ್ದಿದ್ದರೆ ಬಂಧಿತ ಪತ್ರಕರ್ತನ ವೃದ್ದ ತಂದೆ-ತಾಯಿಯ ನೋವು ನಮ್ಮದು ಕೂಡಾ ಎಂದು ಸಮಾಜಕ್ಕೆ ಯಾಕೆ ಅನಿಸುವುದಿಲ್ಲ?